ಕೇಂದ್ರ ಸರ್ಕಾರದ ನಿರ್ದೇಶನ ಇಲ್ಲದೆ ಲಾಕ್‍ಡೌನ್ ಮಾಡಲ್ಲ – ಕಂದಾಯ ಸಚಿವ ಆರ್.ಅಶೋಕ್

Spread the love

ಕೇಂದ್ರ ಸರ್ಕಾರದ ನಿರ್ದೇಶನ ಇಲ್ಲದೆ ಲಾಕ್‍ಡೌನ್ ಮಾಡಲ್ಲ – ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ಲಾಕ್‍ಡೌನ್ ಬೇಕು ಅಂದಾಗ ಹಾಕೋದು, ಬೇಡ ಅಂದಾಗ ಬಿಡೋದು ಮಾಡಲ್ಲ. ತಜ್ಞರ ಜೊತೆ ಚರ್ಚೆ ನಡಿಯುತ್ತಿದೆ. ನುರಿತ ತಜ್ಞರ ಅಭಿಪ್ರಾಯದ ಮೇಲೆ ಸರ್ಕಾರ ಕ್ರಮಕೈಗೊಳ್ಳುತ್ತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್, ರಾಜ್ಯ ಸರ್ಕಾರದ ನೀತಿ-ನಿಯಮಗಳಿವೆ. ಅಲ್ಲದೇ ಕೇಂದ್ರ ಸರ್ಕಾರ ಮಿನಿಟ್ ಟು ಮಿನಿಟ್ ರಾಜ್ಯ ಸರ್ಕಾರದ ಕಾರ್ಯ ವೈಖರಿಯನ್ನು ಫಾಲೋ ಮಾಡುತ್ತಿದೆ. ಜೊತೆಗೆ ಅಲ್ಲಿಂದ ನಿರ್ದೇಶನ ಕೂಡ ಬರುತ್ತಿದೆ. ಇದಕ್ಕೆ ಎಂದು ಒಂದು ನುರಿತ ತಜ್ಞರ ಸಮಿತಿ ಇದೆ. ಆ ಸಮಿತಿಯಲ್ಲಿ ವೈದ್ಯರು, ಐಎಎಸ್ ಅಧಿಕಾರಿಗಳು, ಪೊಲೀಸರು, ಮಂತ್ರಿಗಳು ಇದ್ದಾರೆ. ಪ್ರತಿದಿನ ನಾವು, ಹಿರಿಯ ಸಚಿವರು ಸಿಎಂ ಯಡಿಯೂರಪ್ಪ ಮನೆಯಲ್ಲಿ ಸಭೆ ಮಾಡುತ್ತಿದ್ದೇವೆ ಎಂದು ತಿಳಿದರು.

ಲಾಕ್‍ಡೌನ್ ಬೇಕು ಅಂದಾಗ ಹಾಕೋದು, ಬೇಡ ಅಂದಾಗ ಬಿಡೋದು ಮಾಡಲ್ಲ. ತಜ್ಞರ ಜೊತೆ ಚರ್ಚೆ ನಡಿಯುತ್ತಿದೆ. ನಂತರ ಸಭೆಗಳನ್ನ ಮಾಡುತ್ತೇವೆ. ಜೊತೆಗೆ ಕೇಂದ್ರ ಸರ್ಕಾರದ ನಿರ್ದೇಶನ ಇಲ್ಲದೆ ರಾಜ್ಯ ಸರ್ಕಾರ ಲಾಕ್‍ಡೌನ್ ಮಾಡಲ್ಲ. ನುರಿತ ತಜ್ಞರ ಅಭಿಪ್ರಾಯದ ಮೇಲೆ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ವಾರ್ಡ್ ಆಧಾರದ ಮೇಲೆ ಸೀಲ್‍ಡೌನ್ ಮಾಡಬೇಕಾ? ವಿಧಾನಸಭೆ ಆಧಾರದ ಮೇಲೆ ಸೀಲ್‍ಡೌನ್ ಮಾಡಬೇಕಾ? ಎಂಬುದನ್ನು ಚರ್ಚೆ ಮಾಡುತ್ತಿದ್ದೇವೆ. ಸದ್ಯಕ್ಕೆ ತಜ್ಞರ ವರದಿ ಆಧಾರದ ಮೇಲೆ ನಿರ್ಧಾರ ಮಾಡುತ್ತೇವೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಸಭೆಯಲ್ಲಿ ಏರಿಯಾ ಲಾಕ್‍ಡೌನ್ ವಿಚಾರವಾಗಿಯೂ ಚರ್ಚೆ ಮಾಡುತ್ತೇವೆ ಎಂದರು.

ಈಗಾಗಲೇ ನಗರದ ಕೆಲ ಭಾಗಗಳಲ್ಲಿ ಕಠಿಣ ಕ್ರಮವನ್ನ ಸರ್ಕಾರ ತೆಗೆದುಕೊಂಡಿದೆ. ಜನರಿಗೆ ಅನುಕೂಲವಾಗುವ ನಿರ್ಧಾರವನ್ನ ಸರ್ಕಾರ ತೆಗೆದುಕೊಳ್ಳಲಿದೆ. ಒಂದು ವೇಳೆ ಈ ಕೊರೊನಾ ಸೋಂಕು ಕಡಿಮೆಯಾಗದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಮಗೆ ಜನರ ಆರೋಗ್ಯ ಮತ್ತು ಜೀವ ಮುಖ್ಯ. ಹೀಗಾಗಿ ಮುಂದೆ ಕಠಿಣ ಕ್ರಮತೆಗೆದುಕೊಳ್ಳಬೇಕಾಗುತ್ತದೆ. ಸದ್ಯಕ್ಕೆ ಈಗ ತಜ್ಞರ ವರದಿ ಬರಬೇಕಿದೆ ಎಂದು ಆರ್.ಅಶೋಕ್ ಹೇಳಿದರು.

ಈಗಾಗಲೇ ಪೊಲೀಸ್ ಇಲಾಖೆಗೂ ಆದೇಶ ನೀಡಲಾಗಿದೆ. ಕ್ವಾರಂಟೈನ್ ಆದ ವ್ಯಕ್ತಿಗಳು ಮೊಬೈಲ್ ಮನೆಯಲ್ಲೇ ಬಿಟ್ಟು ಓಡಾಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಅಶೋಕ್ ಹೇಳಿದರು.

ರೋಗಿಯನ್ನ ನಡು ರಸ್ತೆಯಲ್ಲಿ ನಿಲ್ಲಿಸಿ ಬೆಡ್ ಇಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಶೋಕ್, ಬೆಡ್ ಇಲ್ಲ ಅಂತ ಹೇಳುವ ಸಮಸ್ಯೆ ಬರಬಾರದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್ ಇಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಬೆಂಗಳೂರಲ್ಲಿ 2 ಸಾವಿರ ಬೆಡ್ ಇವೆ. ಸರ್ಕಾರದಿಂದ ರೆಫರ್ ಆಗಿ ಹೋಗುವ ರೋಗಿಗಳಿಗೆ ಚಿಕಿತ್ಸೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಹಣ ಬಿಡುಗಡೆ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ನಿಗದಿತ ದರದೊಂದಿಗೆ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ ಆದೇಶ ಹೊರಡಿಸಿದ್ದೇವೆ ಎಂದರು.

ಮತ್ತೆ ಲಾಕ್‌ ಡೌನ್ ಸೂಚನೆ ನೀಡಿದ ಶ್ರೀರಾಮುಲು

ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್ ಬಗ್ಗೆ ಸರ್ಕಾರ ಚಿಂತನೆ ನಡೆಸಿರುವ ಸೂಚನೆಯನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ನೀಡಿದ್ದಾರೆ.

ನಗರದಲ್ಲಿಂದು ಕೆ.ಸಿ.ಜನರಲ್ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಈಗಾಗಲೇ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿವೆ. ಈ‌ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು ವೈದ್ಯರು ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಇನ್ನೊಮ್ಮೆ ಲಾಕ್ ಡೌನ್ ಮಾಡುವ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರತಿ ಜಿಲ್ಲೆಗೂ ಲ್ಯಾಬ್ ಸ್ಥಾಪಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಬೆಂಗಳೂರಿನಲ್ಲಿ ಕೋವಿಡ್‌ ರೋಗಿಗಳಿಗಾಗಿ 1330 ಹಾಸಿಗೆಯ ಸೌಲಭ್ಯವಿದೆ. ಹಿರಿಯ ನಾಗರೀಕರಿಗೆ ಹೆಚ್ಚಿನ ಪರೀಕ್ಷೆ ಮಾಡಲಾಗುವುದು‌. ಕೊರೊನಾ ಪರೀಕ್ಷಾ ಸಂಖ್ಯೆಗಳು ಹೆಚ್ಚಾಗುತ್ತಿರುವುದರಿಂದ ಲ್ಯಾಬ್‌ಗಳ ಸಂಖ್ಯೆಯನ್ನೂ ಸಹ ಹೆಚ್ಚಿಸಬೇಕಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗಾಗಿ ದರ ನಿಗದಿಪಡಿಸಲಾಗಿದೆ‌. ಸರ್ಕಾರಿ ಆಸ್ಪತ್ರೆಗಳಿಗೆ ಮೊದಲ ಆದ್ಯತೆ. ರೋಗಿಗಳು ಇಂತಹ ಖಾಸಗಿ ಆಸ್ಪತ್ರೆಗೆ ಹೋಗಬೇಕು. ಆದ್ಯತೆ ನೀಡಿ ಎಂದು ಮನವಿ ಮಾಡಿದರೆ ಮಾತ್ರ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಶಿಫಾರಸು ಮಾಡಲಾಗುವುದು. ‘ಎ’ ಲಕ್ಷಣ ಇರುವ ಪ್ರಕರಣಗಳೇ ಹೆಚ್ಚಾಗಿದ್ದು, ಇವರನ್ನು ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸಲಾಗುವುದು‌. ಕೊರೋನಾ ದೃಢಪಟ್ಟವರನ್ನು ಸರ್ಕಾರ ನಿಗಾವಹಿಸಲಿದೆ. ಹಜ್ ಭವನ ಐಸಿಯು ಕೇರ್ ಸೆಂಟರ್ ಆಗಿ ಸಿದ್ಧಗೊಂಡಿದ್ದು “ಎ” ಲಕ್ಷಣ ಇರುವ ಸೋಂಕಿತರನ್ನು ಇಲ್ಲಿಗೆ ಸ್ಥಳಾಂತರ ಮಾಡಲಾಗುವುದು ಎಂದರು‌.

ಕೋವಿಡ್ ಆಸ್ಪತ್ರೆಯ ಕಳಪೆ ಗುಣಮಟ್ಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನಲ್ಲಿ ಈ ರೀತಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಮೊನ್ನೆ ಸಮಸ್ಯೆಯಾಗಿತ್ತು. ಅದನ್ನು ಸರಿಪಡಿಸುವ ಕೆಲಸ‌ ಮಾಡಲಾಗುವುದು ಎಂದರು.

ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳಲಾಗುವುದು. ಮುಖ್ಯಮಂತ್ರಿಗಳು ಈ ಬಗ್ಗೆ ಬಹಳ ಗಂಭೀರವಾಗಿದ್ದಾರೆ. ಎಲ್ಲ ಸರಿಪಡಿಸರಿಪಡಿಸುತ್ತೇವೆ ಎಂದು ಶ್ರೀರಾಮುಲು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


Spread the love