Home Mangalorean News Kannada News ಕೊಂಚಾಡಿ ಕಾಶೀ ಮಠದಲ್ಲಿ ರಾಮಾಯಣ ಕಥಾ ಪ್ರವಚನ ಪಾರಾಯಣ ಪ್ರಾರಂಭ

ಕೊಂಚಾಡಿ ಕಾಶೀ ಮಠದಲ್ಲಿ ರಾಮಾಯಣ ಕಥಾ ಪ್ರವಚನ ಪಾರಾಯಣ ಪ್ರಾರಂಭ

Spread the love

ಕೊಂಚಾಡಿ ಕಾಶೀ ಮಠದಲ್ಲಿ ರಾಮಾಯಣ ಕಥಾ ಪ್ರವಚನ ಪಾರಾಯಣ ಪ್ರಾರಂಭ

ಮಂಗಳೂರು : ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶಾರ್ವರಿ ನಾಮ ಸಂವತ್ಸರದ ಚಾತುರ್ಮಾಸ ವ್ರತವು ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ಪ್ರಾರಂಭಗೊಂಡಿದ್ದು ಈ ಸಂದರ್ಭದಲ್ಲಿ ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಪಾರಾಯಣಗಳು ನಡೆಯಲಿವೆ.

ಈ ಪುಣ್ಯಪ್ರದ ಶ್ರಾವಣ ಮಾಸದ ಪ್ರಾರಂಭದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ದೇವರ ಲೀಲೆ – ವೈಭವ , ದೇವರ ಚರಿತ್ರೆ ” ಶ್ರೀ ರಾಮಾಯಣ ಪಾರಾಯಣ ಹಾಗೂ ಪ್ರವಚನ 9 ದಿನಗಳ ಪರ್ಯಂತ ಕೊಂಚಾಡಿ ಕಾಶಿ ಮಠದಲ್ಲಿ ಜರುಗಲಿರುವುದು. ಆಗಸ್ಟ್ ೪ರಂದು ಖುಗೋಪಾಕರ್ಮ, ಆಗಸ್ಟ್ ೧೧ ರಂದು ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಇದಲ್ಲದೇ ಆಗಸ್ಟ್ ೨೨ -೨೬ರ ವರೆಗೆ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು, ಸೆಪ್ಟಂಬರ್ ೧ರಂದು ಅನಂತ ಚತುರ್ದಶಿ ವ್ರತಾಚಾರಣೆ ನಡೆಯಲಿದೆ. ಸೆಪ್ಟಂಬರ್ 18 ರಿಂದ ಅಧಿಕಮಾಸ ಪ್ರಾರಂಭ , ಅಕ್ಟೋಬರ್ ೧೭ ರಿಂದ ನವರಾತ್ರಿ ಆಚರಣೆ ಪ್ರಾರಂಭವಾಗಲಿದ್ದು ಅಕ್ಟೋಬರ್ 28 ರ ವರೆಗೆ ವಿವಿಧ ವಾಹನ ಪೂಜಾ ಸೇವೆಗಳು ನಡೆಯಲಿರುವುದು .

ಈ ಬಾರಿ ಕೊರೊನ ಸೋಂಕು ದಿನೇ ದಿನೇ ಹೆಚ್ಚು ಹರಡುತಿದ್ದು ಕೋವಿಡ್-19 (ಕೊರೋನ ವೈರಾಣು) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತಾದಿಗಳಿಂದ ಸಾಮಾಜಿಕ ಅಂತರವನ್ನು ಕಾಪಾಡುವುದು ಕಷ್ಟವಾಗುವುದರಿಂದ ಭಕ್ತಾದಿಗಳಿಗೆ ಶ್ರೀ ಕ್ಷೇತ್ರಕ್ಕೆ ಭೇಟಿಯನ್ನು ನಿರ್ಭಂದಿಸಲಾಗಿದೆ. ಸರ್ಕಾರದ ಅನ್ವಯದಂತೆ ಶ್ರೀ ದೇವಳದಲ್ಲಿ ಸುರಕ್ಷತಾ ದೃಷ್ಠಿಯನುಸಾರ ಕೈಗೊಳ್ಳ ಬೇಕಾದ ಅಗತ್ಯ ಸುರಕ್ಷತಾ ಕ್ರಮಗಳು ಈ ಕೆಳಗಿನಂತಿದ್ದು ಕಡ್ಡಾಯವಾಗಿ ಪಾಲಿಸ ಬೇಕಾಗಿ ವಿನಂತಿ. ಮುಂದಿನ ದಿನಗಳಲ್ಲಿ ಅನುಕೂಲಕರ ಪರಿಸ್ಥಿತಿ ಉಂಟಾದಾಗ ಭಕ್ತಾದಿಗಳಿಗೆ ಸೇವೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು

ಚಿತ್ರ : ಮಂಜು ನೀರೇಶ್ವಾಲ್ಯ


Spread the love

Exit mobile version