ಕೊರಗರ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ- ಸಚಿವ ಪ್ರಮೋದ್ ಮಧ್ವರಾಜ್ ಕರೆ

Spread the love

ಕೊರಗರ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ- ಸಚಿವ ಪ್ರಮೋದ್ ಮಧ್ವರಾಜ್ ಕರೆ

ಉಡುಪಿ : ಜಿಲ್ಲೆಯ ಅತ್ಯಂತ ಹಿಂದುಳಿದ ಮೂಲನಿವಾಸಿಗಳಾದ ಕೊರಗರ ಆರೋಗ್ಯ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾಡಳಿತ ಮುಂದಾಗಿದ್ದು, ಈಗಾಗಲೇ ಮಣಿಪಾಲ ಆಸ್ಪತ್ರೆಯ ಸಮುದಾಯ ಆರೋಗ್ಯ ಕೇಂದ್ರದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಹಾಗೂ ಜಿಲ್ಲಾ ಸರ್ಜನ್ ಅಧ್ಯಕ್ಷತೆಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳನ್ನೊಳಗೊಂಡಂತೆ ಆರೋಗ್ಯ ಸಮಿತಿಯನ್ನು ರಚಿಸಲಾಗಿದೆ ಎಂದು ರಾಜ್ಯದ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಹೇಳಿದರು.

ಜನವರಿ 5ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಸಾಮಾಜಿಕ ಕಳಕಳಿಯುಳ್ಳ ಶೈಕ್ಷಣಿಕ ಪರಿಣತರು ಈ ಸಮಿತಿಯಲ್ಲಿ ಸ್ವ ಆಸಕ್ತಿಯಿಂದ ಪಾಲ್ಗೊಂಡು ನೆರವು ನೀಡಿ ಎಂದು ಕೋರಿದರು.

ಈ ಕರ್ತವ್ಯವನ್ನು ಸಮಾಜ ಸೇವೆ ಎಂದು ಪರಿಗಣಿಸಿ ಮಾಡಿ ಎಂದೂ ಸಚಿವರು ಸಭೆಯಲ್ಲಿದ್ದ ಶೈಕ್ಷಣಿಕ ವಲಯದವರಲ್ಲಿ ವಿನಂತಿಸಿದರು.


Spread the love