ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಉಡುಪಿ ನಿರ್ಮಿತಿ ಕೇಂದ್ರ ಸಾಥ್, 1 ಕೋಟಿ ರೂ ದೇಣಿಗೆ

Spread the love

ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಉಡುಪಿ ನಿರ್ಮಿತಿ ಕೇಂದ್ರ ಸಾಥ್, 1 ಕೋಟಿ ರೂ ದೇಣಿಗೆ

ಉಡುಪಿ: ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಉಡುಪಿ ಜಿಲ್ಲೆಯ ನಿರ್ಮಿತಿ ಕೇಂದ್ರ ಕೈ ಜೋಡಿಸಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂ ಗಳ ದೇಣಿಗೆಯನ್ನು ನೀಡಿದೆ.

ಗುರುವಾರ ನಗರದ ಪ್ರೆಸ್ ಕ್ಲಬ್ಬಿನಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್ ಅವರು ನಿರ್ಮಿತಿ ಕೇಂದ್ರದ ಅಧ್ಯಕ್ಷರೂ ಜಿಲ್ಲಾಧಿಕಾರಿಯೂ ಆಗಿರುವ ಜಿ ಜಗದೀಶ್ ಅವರಿಗೆ 1 ಕೋಟಿ ರೂಗಳ ಚೆಕ್ಕನ್ನು ಹಸ್ತಾಂತರ ಮಾಡಿದರು.

ಈ ವೇಳೆ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಉಪಸ್ಥಿತರಿದ್ದರು.


Spread the love