ಕೊಲೆ ಯತ್ನ ಮತ್ತು ಗಾಂಜಾ ಜಾಲದ ಆರೋಪಿಯ ಸೆರೆ

Spread the love

ಕೊಲೆ ಯತ್ನ ಮತ್ತು ಗಾಂಜಾ ಜಾಲದ ಆರೋಪಿಯ ಸೆರೆ

ಮಂಗಳೂರು: ಕೊಲೆ ಯತ್ನ ಮತ್ತು ಗಾಂಜಾ ಮಾರಾಟ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಮುಳ್ಳುಗುಡ್ಡೆ ಇಮ್ತಿಯಾಜ್ ಎಂಬಾತನನ್ನು ಕೊಟೆಕಾರು ಗ್ರಾಮದ ಅಜೀನಡ್ಕ ಎಂಬಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ರಾಮ ರಾವ್ ರವರ ನೇತೃತ್ವದ ರೌಡಿ ನಿಗ್ರಹ ದಳದ ಸಿಬ್ಬಂದಿಗಳು ವಶಕ್ಕೆ ಪಡೆಯಲು ಯಶಸ್ವಿಯಾಗಿರುತ್ತಾರೆ.

ಬಂಧಿತ ಆರೋಪಿಯನ್ನು ನೆತ್ತೀಲಪದವು ಮಹಮ್ಮದ್ ಅಜೀಜ್ @ ಅಬ್ದುಲ್ ಅಜೀಜ್ ಎಂದು ಗುರುತಿಸಲಾಗಿದೆ.

ಮೇಲ್ಕಂಡ ಆರೋಪಿತ ಈ ಹಿಂದೆ ಕೊಣಾಜೆ ಠಾಣಾ ವ್ಯಾಪ್ತಿಯ ಕೇರಳ ಗಡಿ ಪ್ರದೇಶವಾದ ನೆತ್ತಿಲಪದವು ಎಂಬಲ್ಲಿ ಮಹಮ್ಮದ್ ಅಜೀಜ್ @ ಅಬ್ದುಲ್ ಅಜೀಜ್ ಮತ್ತು ಇಮ್ತಿಯಾಜ್ ಎಂಬವರು ಆಕ್ಟೀವಾ ಸ್ಕೂಟರ್ ನಲ್ಲಿ ತಿರುಗಾಡುತ್ತಾ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ರೌಡಿನಿಗ್ರಹದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ನೆತ್ತಿಲ ಪದವು ಕಲ್ಲರಕೋಡಿ ಎಂಬಲ್ಲಿ ಸುಮಾರು 10.250 ಕೆ.ಜಿ. ಗಾಂಜಾ ಮತ್ತು ಕೆ.ಎ.19-ಕ್ಯೂ -1625 ನಂಬ್ರದ ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿದ್ದು ಸ್ಥಳದಲ್ಲಿ ಗ್ರಾಹಕರಿಗೆ ಮಾರಾಟ ಮಾಡಲು ಗಾಂಜಾ ಪೊಟ್ಟಣಗಳೊಂದಿಗೆ ಕಾಯುತ್ತಿದ್ದಾಗ ಧಾಳಿ ಮಾಡಿದ ಸಮಯ ಪೊಲೀಸರನ್ನು ಕಂಡು ಗುಡ್ಡದ ಇಳಿಜಾರಿನಲ್ಲಿ ಇಮ್ತಿಯಾಜ್ನು ಓಡಿ ಪರಾರಿಯಾಗಿರುತ್ತಾನೆ. ಇದರಲ್ಲಿ ಅಜೀಜ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಈಗಾಗಲೇ ಕಾರಗೃಹದಲ್ಲಿರುತ್ತಾನೆ.

ಈತನು ಈ ಹಿಂದೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಳ್ಳುಗುಡ್ಡೆ ಎಂಬಲ್ಲಿ ಪಚ್ಚಿಲ ಅಜೀಜ್ ಎಂಬಾತನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈತನ ವಿರುದ್ದ ಈ ಹಿಂದೆ ಉಳ್ಳಾಲ ಠಾಣೆ, ಕೊಣಾಜೆ ಠಾಣೆ ಹಾಗೂ ಕಾವೂರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುತ್ತದೆ.. ಮುಂದಿನ ಕ್ರಮದ ಬಗ್ಗೆ ಕೊಣಾಜೆ ಠಾಣೆಗೆ ಹಸ್ತಾಂತರಿಸಲಾಗಿದೆ.

ಮಂಗಳೂರು ದಕ್ಷಿಣ ಉಪ ವಿಭಾಗದ ಎ.ಸಿ.ಪಿ. ರವರ ನೇತೃತ್ವದ ರೌಡಿ ನಿಗ್ರಹ ದಳದ ಸಿಬ್ಬಂದಿಗಳು ಮತ್ತು ಪಿ.ಎಸ್.ಐ ಅಪರಾಧ ಪತ್ತೆ ಕೊಣಾಜೆ ಠಾಣೆ ಯವರು ಪತ್ತೆ ಕಾರ್ಯದಲ್ಲಿ ಬಾಗವಹಿಸಿದ್ದಾರೆ.


Spread the love