ಕೋಟ: ತಾಯಿ ಓದು ಎಂದದ್ದಕೆ ಆತ್ಮಹತ್ಯೆ ಮಾಡಿಕೊಂಡ ಏಳನೇ ತರಗತಿ ವಿದ್ಯಾರ್ಥಿ

Spread the love

ಕೋಟ: ತಾಯಿ ಓದು ಎಂದದ್ದಕೆ ಆತ್ಮಹತ್ಯೆ ಮಾಡಿಕೊಂಡ ಏಳನೇ ತರಗತಿ ವಿದ್ಯಾರ್ಥಿ

ಉಡುಪಿ: ಏಳನೆ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಾಜ್ರಳ್ಳಿ ಜನತಾ ಕಾಲೋನಿ ಶಿರಿಯಾರದಲ್ಲಿ ಬುಧವಾರ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ಶಿರಿಯಾರ ಗ್ರಾಮ ಬ್ರಹ್ಮಾವರ ತಾಲೂಕು ಬಳಿಯ ಕವಿತಾ ಅವರ ಮಗ ತನುಷ್(12) ಎಂದು ಗುರುತಿಸಲಾಗಿದೆ.

ತನುಷ್ 7 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು,ಕಲಿಯುವಿಕೆಯಲ್ಲಿ ಹಿಂದಿದ್ದು ಹೇಳಿದ ಮಾತನ್ನು ಕೇಳದೇ ಹಠಮಾರಿ ತನದಿಂದ ವರ್ತಿಸುತ್ತಿದ್ದು, ಈಗ ಆನ್ ಲೈನ್ ಕ್ಲಾಸ್ ನಡೆಯುತ್ತಿದ್ದು ಎಂದಿನಂತೆ ತಾಯಿ ಒಳ್ಳೆಯ ರೀತಿಯಲ್ಲಿ ಓದು ಎಂದು ಬುದ್ದಿ ಮಾತನ್ನು ಹೇಳಿ ತನ್ನ ಕೆಲಸಕ್ಕೆ ಹೋಗಿದ್ದು, ತನುಷನು ಹಠಮಾರಿತನ ದಿಂದ ಹಾಗೂ ವಿದ್ಯೆ ಸರಿಯಾಗಿ ತಲೆಗೆ ಹೋಗದ ಕಾರಣ ಬೇಸರ ಗೊಂಡು ಅಥವಾ ಇನ್ನಾವುದೋ ಕಾರಣದಿಂದ ತನುಷನು ಹಳೆಯ ಮನೆಯ ಕೊಠಡಿಯಲ್ಲಿದ್ದ ಜೋಕಾಲಿ ಸೀರೆಯನ್ನು ಪಕ್ಕಾಸಿಗೆ ಕಟ್ಟಿದ್ದು, ಅದೇ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love