ಕೋವಿಡ್ 19: ಉಡುಪಿ ಜಿಲ್ಲೆಯಲ್ಲಿ ಜುಲೈ 15 ರಿಂದ ಸೆಕ್ಷನ್ 144(3) ಜಾರಿ 

Spread the love

ಕೋವಿಡ್ 19: ಉಡುಪಿ ಜಿಲ್ಲೆಯಲ್ಲಿ ಜುಲೈ 15 ರಿಂದ ಸೆಕ್ಷನ್ 144(3) ಜಾರಿ 

ಉಡುಪಿ: ಕೋವಿಡ್ -19 (ಕೋರೊನ ವೈರಾಣು ಕಾಯಿಲೆ 2019)ಯ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಗಡಿಗಳನ್ನು ಸೀಲ್ ಡೌನ್ ಮಾಡಲಾಗಿದ್ದು ಈ ನಿಟ್ಟಿನ್ನಲಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಜುಲೈ 15 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಜಿಲ್ಲೆಯಲ್ಲಿ 144(3) ವಿಧಿಸಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲಾಗಿದ್ದು ಆದೇಶ ಪ್ರತಿಯವ ವಿವರ ಇಂತಿದೆ
ಕೋವಿಡ್ -19 (ಕೋರೊನ ವೈರಾಣು ಕಾಯಿಲೆ 2019)ಯ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಲ್ಲೇಖ(3)ರ ಸರ್ಕಾರದ ಆದೇಶದಲ್ಲಿ ಕೋವಿಡ್ -19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಸರ್ಕಾರವು ಈಗಾಗಲೇ ಹೊರಡಿಸಿದ ಮಾರ್ಗಸೂಚಿಗಳಿಗೆ ಸೇರ್ಪಡೆ ಹಾಗೂ ತಿದ್ದುಪಡಿಗಳನ್ನು ಹೊರಡಿಸಿರುತ್ತದೆ.

ಉಲ್ಲೇಖ(4) ರ ಆದೇಶದಂತೆ ಕಂಟೈನ್ ಮೆಂಟ್ ವಲಯಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆ ನಿರ್ಭಂಧಗಳನ್ನು ವಿಧಿಸಿ ಮತ್ತು ಸಂಪೂರ್ಣವಾಗಿ ಲಾಕ್ ಡೌನ್ ವಿಸ್ತರಿಸಲು ಮತ್ತು ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಹಂತಹಂತವಾಗಿ ನಿಷೇಧಿತ ಚಟುವಟಿಕೆಗಳನ್ನು ಪುನ: ಪ್ರಾರಂಭಿಸುವ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿ ಲಾಕ್ ಡೌನ್ ಅವಧಿಯನ್ನು ವಿಸ್ತರಿಸಿ ಸಿ.ಆರ್.ಪಿ.ಸಿ. ಸೆಕ್ಷನ್ 144(3) ನಿಷೇಧಾಜ್ಞೆಯನ್ನು ಪರಿಷ್ಕರಿಸಿ ಆದೇಶಿಸಲಾಗಿದೆ .

ಮುಂದುವರಿದು  ಮುಖ್ಯಮಂತ್ರಿಯವರು ದಿನಾಂಕ: 13-07-2020 ರಂದು ನಡೆದ ವೀಡಿಯೋ ಕಾನ್ಪರೆನ್ಸ್ ನಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಲಾಕ್ಡೌನ್ ಮಾಡುವ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಧರಿಸುವಂತೆ ಆದೇಶ ನೀಡಿರುತ್ತಾರೆ. ಅದರಂತೆ ಜಿಲ್ಲೆಯ ಉಸ್ತುವಾರಿ ಸಚಿವರು , ಹಾಗೂ ಜಿಲ್ಲಾ ವೈದ್ಯಕೀಯ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ, ಉಲ್ಲೇಖ(4)ರ ಈ ಕಛೇರಿಯ ನಡವಳಿಯನ್ನು ಪರಿಷ್ಕರಿಸಿ ಜಿಲ್ಲಾಧಿಕಾರಿಯವರು ಸಿ.ಆರ್.ಪಿ.ಸಿ. ಸೆಕ್ಷನ್ 144(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡಂತೆ ಆದೇಶವನ್ನು ಹೊರಡಿಸಿದ್ದಾರೆ.

ಆದೇಶ
ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 (ಕೋರೊನ ವೈರಾಣು ಕಾಯಿಲೆ 2019) ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧನೆಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್ ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬಂದಿದ್ದು ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಜುಲೈ 15 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ಕೆಳಗಿನಂತೆ ಆದೇಶಗಳನ್ನು ಹೊರಡಿಸಿದ್ದಾರೆ

A) ಕಂಟೈನ್ ಮೆಂಟ್ ವಲಯಗಳಲ್ಲಿ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು.
1) ಕಂಟೈನ್ ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇರುತ್ತದೆ.
2) ವೈದ್ಯಕೀಯ ತುರ್ತು ಸೇವೆಗಳು ಮತ್ತು ಅವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾಗಿದೆ.ಇವುಗಳ ಹೊರತು ಕಂಟೈನ್ ಮೆಂಟ್ ವಲಯದ ಒಳಗೆ ಹಾಗೂ ಹೊರಗೆ ಜನರ ಚಲನ ವಲನಗಳನ್ನು ನಿಷೇಧಿಸಲಾಗಿದೆ.

B) ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಚಟುವಟಿಕೆಗಳು : ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಈ ಕೆಳಗಿನ ಚಟುವಟಿಕೆಗಳನ್ನು ಹೊರತು ಪಡಿಸಿ ಎಲ್ಲಾ ಚಟುವಟಿಕೆಗಳನ್ನು ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಲಕಾಲಕ್ಕೆ ಹೊರಡಿಸಿದ , ಸೂಚನೆಗಳು ಮತ್ತು ಕಾರ್ಯಾಚರಣೆಯ ಕಾರ್ಯವಿಧಾನಗಳ ಷರತ್ತುಗಳೊಂದಿಗೆ ನಡೆಸಲು ಅನುಮತಿಸಲಾಗಿದೆ. ಆದರೆ

1) ಸಾರ್ವಜನಿಕರಿಗೆ ಧಾರ್ಮಿಕ ಸ್ಥಳಗಳು /ಪೂಜಾ ಸ್ಥಳಗಳು .ಹೋಟೆಲ್ ಗಳು ರೆಸ್ಟೋರೆಂಟ್ ಗಳು ಮತ್ತು ಇತರ ಅತಿಥ್ಯ ಸೇವೆಗಳು . ಶಾಪಿಂಗ್ ಮಾಲ್ ಗಳು ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಆದರೆ ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಿಂದ ಹೊರಡಿಸಲಾದ ಮಾರ್ಗಸೂಚಿಯ (SOP) ಷರತ್ತುಗಳನ್ನು ಪಾಲಿಸತಕ್ಕದ್ದು . ದೇವಸ್ಥಾನ, ಚರ್ಚ್, ಮಸೀದಿಗಳನ್ನು ಸಾರ್ವಜನಿಕ ದರ್ಶನಕ್ಕೆ ಮಾತ್ರ ಸೀಮಿತವಾಗಿದೆ. ಈ ಸಮಯದಲ್ಲಿ ಒಮ್ಮೆಗೆ ಅರ್ಚಕರು/ ಮೌಲ್ಯಿಗಳು/ ಧರ್ಮಗುರುಗಳು/ ಭಕ್ತಾಧಿಗಳು ಸೇರಿ 20 ಜನರಿಗಿಂತ ಜಾಸ್ತಿ ಇರತಕ್ಕದಲ್ಲ. ಯಾವುದೇ ವಿಶೇಷ ಪೂಜೆಗಳು/ ದಾರ್ಮಿಕ ಆಚರಣೆಗಳು ಇರುವುದಿಲ್ಲ.

2) ಸಾರ್ವಜನಿಕವಾಗಿ ಹಬ್ಬ, ಅಚರಣೆಗಳು ಇರುವುದಿಲ್ಲ.

3) ವಿವಾಹದ ಸಂಧರ್ಭಗಳಲ್ಲಿ ಸಾಮಾಜಿಕ ಅಂತರವನ್ನು ಖಾತರಿಪಡಿಸಿಕೊಂಡು, ಗರಿಷ್ಟ 50 ಜನರನ್ನುಮಾತ್ರ ಅಹ್ವಾನಿಸತಕ್ಕದ್ದು.ಈ ಬಗ್ಗೆ ಹೊರಡಿಸಲಾದ ಸರಕಾರದ ಎಲ್ಲಾ ನಿಯಮಾವಳಿಗಳನ್ನು ಪಾಲಿಸುವುದು.ಈ ಬಗ್ಗೆ ಕಡ್ಡಾಯವಾಗಿ ಸಂಬಂಧ ಪಟ್ಟ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆಯುವುದು.

4) ಶವ ಸಂಸ್ಕಾರ ಸಮಯದಲ್ಲಿ ಸಾಮಾಜಿಕ ಅಂತರವನ್ನು ಖಾತರಿಪಡಿಸಿಕೊಳ್ಳುವುದು ಮತ್ತು ಗರಿಷ್ಟ 20 ಜನರಿಗಿಂತ ಮೇಲೆ ಸೇರದೇ ಇರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.

5) ಅಂಗಡಿಗಳ ಮಾಲಿಕರು ಮತ್ತು ಗ್ರಾಹಕರ ನಡುವೆ ಕನಿಷ್ಟ ಆರು (6 ) ಅಡಿ ದೂರದಲ್ಲಿರುವುದನ್ನು ( 2 ಗಜ್ ಕಿ ದೂರಿ ) ಖಚಿತಪಡಿಸಿಕೊಳ್ಳುವುದು ಮತ್ತು ಅಂಗಡಿಗಳಲ್ಲಿ 5 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಅನುಮತಿಸಬಾರದು. [ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಮಾಲೀಕರೇ ನಿರ್ಧರಿಸಿದ್ದಲ್ಲಿ ಜಿಲ್ಲಾಡಳಿತದ ಅಭ್ಯಂತರವಿಲ್ಲ. ]

6) ಬೆಳಿಗ್ಗೆ 5.00 ರಿಂದ ರಾತ್ರಿ 8.00 ರವರೆಗೆ ಉಡುಪಿ ಜಿಲ್ಲೆಯೊಳಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳತಕ್ಕದ್ದು .ಹಾಗೂ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು . ರಾತ್ರಿ 8.00 ರಿಂದ ಬೆಳಿಗ್ಗೆ 5.00 ರವರೆಗೆ ಸಾರ್ವಜನಿಕರ ಸಂಚಾರವನ್ನು ನಿರ್ಭಂಧಿಸಲಾಗಿದೆ. ಈ ಕರ್ಪ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ( ಸರ್ಕಾರದ ಆದೇಶ ಸಂಖ್ಯೆ:ಸಂ:ಆರ್ ಡಿ 158 ಟಿ.ಎನ್ .ಆರ್ 2020(ಭಾಗ) ದಿನಾಂಕ:04.06.2020 ರಲ್ಲಿ ವಿನಾಯತಿ ನೀಡಿರುವುದನ್ನು ಹೊರತುಪಡಿಸಿ )

7) ಮುಂದಿನ ಭಾನುವಾರಗಳು ಅಂದರೆ ದಿನಾಂಕ:02.08.2020ರವರೆಗಿನ ಎಲ್ಲಾ ಭಾನುವಾರಗಳಂದು ಪೂರ್ಣ ದಿನದ ಲಾಕ್ ಡೌನ್ ಇರತಕ್ಕದ್ದು. ಆದರೆ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಪೆಟ್ರೋಲ್ ಪಂಪ್/ ಮೆಡಿಕಲ್/ ಕ್ಲಿನಿಕಲ್ ಲ್ಯಾಬ್/ ಆಸ್ಪತ್ರೆ/ ಹಾಲು/ ದಿನಪತ್ರಿಕೆ ಮಾರಾಟಕ್ಕೆ ನಿರ್ಬಂಧವಿರುವುದಿಲ್ಲ. ಹೊಟೇಲ್ಗಳಿಂದ ಪಾರ್ಸೆಲ್ ಗಳಿಗೆ, ಫುಡ್ ಡೆಲಿವರಿಗೆ ಅವಕಾಶವಿದೆ.

8) ದಿನಾಂಕ: 15-07-2020 ರ ಸಂಜೆ 8.00 ರಿಂದ 29-07-2020 ರವರೆಗೆ 14 ದಿನಗಳವರೆಗೆ ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲಾಗುವುದು. (ತುರ್ತು ವೈದ್ಯಕೀಯ ಪ್ರಕರಣಗಳನ್ನು ಹೊರತುಪಡಿಸಿ) . ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಬಸ್ ಸಂಚಾರ ಮತ್ತು ಯಾವುದೇ ಸಂತೆಗಳು ಇರುವುದಿಲ್ಲ. ಹೊರ ಜಿಲ್ಲೆಯಿಂದ ಹಾಗೂ ರಾಜ್ಯದಿಂದ ಬರುವವರು ಹಾಗೂ ಹೋಗುವವರು 15 ರ ಸಂಜೆ 8 ಗಂಟೆಯ ಒಳಗಾಗಿ ಹೋಗಲು / ಬರಲು ಅವಕಾಶ ನೀಡಿದೆ.

9) ಜಿಲ್ಲೆಯ ಒಳಗೆ ಎಲ್ಲಾ ಆರ್ಥಿಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿರುತ್ತದೆ. ಅಂತರ ರಾಜ್ಯ / ಅಂತರ ಜಿಲ್ಲಾ ಸರಕು ಸಾಗಾಣಿಕೆ/ ವಸ್ತುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ.

C) ಕಂಟೈನ್ ಮೆಂಟ್ ವಲಯ ಮತ್ತು ಹೊರ ವಲಯಗಳಲ್ಲಿ ಕೋವಿಡ್ -19 ನಿರ್ವಹಣೆಗೆ ಸಂಬಂಧಿಸಿ
1) ಸಾರ್ವಜನಿಕರು ಎಲ್ಲಾ ಸಾರ್ವಜನಿಕ ಸ್ದಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸುವುದು ಮತ್ತು ಎಲ್ಲಾ ವ್ಯಕ್ತಿಗಳು ಸಾಮಾಜಿಕ ಅಂತರವನ್ನು ಅನುಸರಿಸುವುದು.ಉಲ್ಲಂಘನೆಗಾಗಿ ನಿಗದಿತ ಅಧಿಕಾರಿಗಳು ನಿಗದಿಪಡಿಸಿದ ದಂಡವನ್ನು ವಿಧಿಸುವುದು/ಕಾನೂನು ಕ್ರಮ ವಹಿಸುವುದು.
2) ಸ್ದಳೀಯ ಪ್ರಾಧಿಕಾರಗಳು ಅದರ ಕಾನೂನುಗಳು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಸಾರ್ವಜನಿಕ ಸ್ದಳಗಳಲ್ಲಿ ಉಗಿಯುವುದನ್ನು ನಿರ್ಬಂಧಿಸಿದೆ ಹಾಗೂ ಇದರ ಉಲ್ಲಂಘನೆಗಾಗಿ ನಿಗದಿಪಡಿಸಿದ ದಂಡವನ್ನು ವಿಧಿಸುವುದು.
3) ಸಾರ್ವಜನಿಕ ಸ್ದಳಗಳಲ್ಲಿ ಮಧ್ಯಪಾನ , ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಗೆ ಅವಕಾಶವಿಲ್ಲ.
4) ಬೃಹತ್ ಸಾರ್ವಜನಿಕ ಸಭೆಗಳು /ಒಟ್ಟು ಗೂಡುವಿಕೆಗಳನ್ನು ನಿಷೇಧವನ್ನು ಮುಂದುವರಿಸಿದೆ.
5) ಎಲ್ಲಾ ರಾಜಕೀಯ / ಸಾಮಾಜಿಕ /ಕ್ರೀಡಾ/ ಮನೋರಂಜನಾ/ಶೈಕ್ಷಣಿಕ /ಸಾಂಸೃತಿಕ ಮತ್ತು ಧಾರ್ಮಿಕ ಮತ್ತು ಇತರ ಜನಸೇರುವ ಕಾರ್ಯಕ್ರಮಗಳನ್ನು ನಿರ್ಬಂಧಿಸಿದೆ.
6) ನಾಟಕಗಳು, ಯಕ್ಷಗಾನಗಳನ್ನು ನಡೆಸುವಂತಿಲ್ಲ ಮತ್ತು ರಂಗಮಂದಿರಗಳನ್ನು ತೆರೆಯುವಂತಿಲ್ಲ. ,
7) ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ವಾಣಿಜ್ಯ ಶಾಲೆಗಳನ್ನು , ಟ್ಯುಟೋರಿಯಲ್ಸ್ ಮತ್ತು ಕೋಚಿಂಗ್ ಸೆಂಟರ್ ಗಳನ್ನು ಬಂದ್ ಮಾಡಲಾಗಿದ್ದು , ಅವುಗಳನ್ನು ತೆರೆಯತಕ್ಕದ್ದಲ್ಲ. Online / distance learningಗೆ ನಿಯಮದನ್ವಯ ಅವಕಾಶ ಕಲ್ಪಿಸಲಾಗಿದೆ.
8) ಸಿನಿಮಾ ಹಾಲ್ಗಳು/ ಥಿಯೆಟರ್ ,ಜಿಮ್ ಗಳು, ಈಜುಕೊಳಗಳು, ಮನರಂಜನಾ ಪಾರ್ಕ್ ಗಳು ,ಮತ್ತು ಅಂತಹ ಸ್ಥಳಗಳು ಬಾರ್ಗಳು ಮತ್ತು ಸಭಾಂಗಣಗಳು, ಅಸೆಂಬ್ಲಿ ಹಾಲ್ ಗಳನ್ನು ತೆರೆಯತಕ್ಕದ್ದಲ್ಲ.
9) ಪಬ್ ಗಳು, ಕ್ಲ ಬ್ ಗಳು,ಹಾಗು ನೈಟ್ ಕ್ಲಬ್ ಗಳನ್ನು ತೆರೆಯತಕ್ಕದ್ದಲ್ಲ.
10) 65 ವರ್ಷ ಜಾಸ್ತಿ ಪ್ರಾಯದ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ಪ್ರಾಯದ ಮಕ್ಕಳು ಮತ್ತು ಗರ್ಭಿಣಿಯರು, ಅಸ್ವಸ್ಥರು , ತುರ್ತು ವೈದ್ಯಕೀಯ ಕಾರಣ ಹೊರತ್ತು ಪಡಿಸಿ ಮನೆಯಿಂದ ಹೊರಗೆ ಬರುವುದು ಸೂಕ್ತವಲ್ಲ.
ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು Disaster Management Act 2005 , ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಮತ್ತು IPC ಸೆಕ್ಷನ್ 188 ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.


Spread the love