Home Mangalorean News Kannada News ಕೋವಿಡ್ – 19 : ಸುಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ದ.ಕ. ಜಿಲ್ಲಾಧಿಕಾರಿ...

ಕೋವಿಡ್ – 19 : ಸುಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

Spread the love

ಕೋವಿಡ್ – 19 : ಸುಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೋವಿಡ್ – 19(ಕೋರಾನಾ ವೈರಾಣು ಕಾಯಿಲೆ -2019) ಯ ಸೋಂಕು ಹರಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿರುತ್ತದೆ. ಪ್ರತಿನಿತ್ಯ ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ಹಾಗೂ ಕೈಗೊಳ್ಳಲಾಗುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಕಟಣೆಗಳನ್ನು ಹೊರಡಿಸಲಾಗುತ್ತದೆ.

ಜಿಲ್ಲಾಡಳಿದಿಂದ ಅಧಿಕೃತವಾಗಿ ಹೊರಡಿಸಲಾಗುವ ಪ್ರಕಟಣೆಗಳ ಹೊರತಾಗಿಯೂ ಕೆಲವು ಆತಂಕಕಾರಿ ಸುಳ್ಳು ಸುದ್ದಿಗಳನ್ನು ಸುದ್ದಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುತ್ತಿರುವುದನ್ನು ಗಮನಿಸಲಾಗಿದೆ. ಈ ರೀತಿ ಸುಳ್ಳು ಸುದ್ದಿಗಳನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡುವುದರಿಂದ ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಠಿಯಾಗುವುದಲ್ಲದೇ ಗೊಂದಲದ ವಾತಾವರಣ ಉಂಟಾಗುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಸುದ್ದಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


Spread the love

Exit mobile version