ಕ್ರಿಕೆಟ್ ಬೆಟ್ಟಿಂಗ್; ಇಬ್ಬರು ಬುಕ್ಕಿಗಳ ಬಂಧನ

Spread the love

ಕ್ರಿಕೆಟ್ ಬೆಟ್ಟಿಂಗ್; ಇಬ್ಬರು ಬುಕ್ಕಿಗಳ ಬಂಧನ

ಮಂಗಳೂರು: ಕ್ರಿಕೆಟ್ ಪಂದ್ಯಕ್ಕೆ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡ ಇಬ್ಬರು ಕ್ರಿಕೆಟ್ ಬುಕ್ಕಿಗಳನ್ನು ಉತ್ತರ ಉಪವಿಭಾಗದ ರೌಡಿ ನಿಗ್ರಹ ದಳ ಮತ್ತು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರು ಕುಳಾಯಿ ನಿವಾಸಿ ಭರತೇಶ್ ಎಸ್. ಶ್ರೀಯಾನ್ (38) ಮತ್ತು ಕದ್ರಿ ನಿವಾಸಿ ಮಹಂತೇಶ್ ಅಮೀನ್ (38) ಎಂದು ಗುರುತಿಸಲಾಗಿದೆ.

ದಿನಾಂಕ 29.03.2019 ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು ಸರಹದ್ದಿನ ಮೀನಕಳಿಯ ಸಮುದ್ರ ಕಿನಾರೆಯಲ್ಲಿ ನವಜ್ಯೋತಿ ಯುವಕ ವೃಂದದ ಹಿಂಭಾಗ ಸಮುದ್ರ ಕಿನಾರೆಯಲ್ಲಿ ಭರತೇಶ್ ಎಸ್. ಶ್ರೀಯಾನ್ ಮತ್ತು ಮಹಂತೇಶ್ ಅಮೀನ್ ಎಂಬವರು Brizze Sport ಮತ್ತು Delight ಎಂಬ Mobile App ನಲ್ಲಿ ಪಾಕಿಸ್ತಾನ ಮತ್ತು ಆಸ್ಟೇಲಿಯಾ ನಡುವೆ ಅಬುದಾಬಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್ ಪಂದ್ಯಕ್ಕೆ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಮತ್ತು ಇವರುಗಳಿಂದ ಹಣ ಸಂಗ್ರಹ ಮಾಡಲು ಬೇರೆ ವ್ಯಕ್ತಿಯು ಬರುತ್ತಿರುವುದಾಗಿ ಮಂಗಳೂರು ನಗರ ಉತ್ತರ ಉಪವಿಭಾಗ ರೌಡಿ ನಿಗ್ರಹ ದಳದ ಪೊಲೀಸ್ ಉಪ ನಿರೀಕ್ಷಕರಾದ   ಶೀತಲ್ ಅಲಗೂರು ಮತ್ತು ಅವರ ತಂಡಕ್ಕೆ ದೊರೆತ ಖಚಿತ ವರ್ತಮಾನದಂತೆ ಮಾಹಿತಿಯನ್ನು ಕೂಡಲೇ ಪಣಂಬೂರು ಪೊಲೀಸ್ ನಿರೀಕ್ಷಕರಿಗೆ ಬರವಣಿಗೆಯಲ್ಲಿ ನೀಡಿ ಪೊಲೀಸ್ ನಿರೀಕ್ಷಕರು ಸದರಿ ಮಾಹಿತಿಯನ್ನು ದಾಖಲಿಸಿಕೊಂಡು ನ್ಯಾಯಾಯಲದಿಂದ ಅನುಮತಿಯನ್ನು ಪಡದುಕೊಂಡು ಭಾತ್ಮೀದಾರರು ತಿಳಿಸಿದ ಸ್ಳಳಕ್ಕೆ ಜಂಟಿಯಾಗಿ ದಾಳಿ ನಡೆಸಿ ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದ ಭರತೇಶ್ ಎಸ್. ಶ್ರೀಯಾನ್ ಮತ್ತು ಮಹಂತೇಶ್ ಅಮೀನ್ ಎಂಬವರನ್ನು ವಿಚಾರಿಸಿ ಅವರುಗಳು ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಗೆ ಉಪಯೋಗಿಸುತ್ತಿದ್ದ ಮೊಬೈಲ್, ಅವರುಗಳು ಸಾರ್ವಜನಿಕರಿಂದ ಅಕ್ರಮ ಬೆಟ್ಟಿಂಗ್ ದಂಧೆಗೆ ಸಂಗ್ರಹಿಸಿದ್ದ ಹಣವನ್ನು ಪಂಚರ ಸಮಕ್ಷಮ ಸ್ವಾಧೀನಪಡಿಸಿಕೊಂಡು ಅವರುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸುವಲ್ಲಿ ಯಶಸ್ವೀಯಾಗಿರುತ್ತಾರೆ.

ಬಂಧಿತರಿಂದ ರೂ 43000 ಮೌಲ್ಯದ ಮೊಬೈಲ್ ಹಾಗೂ ಸಾರ್ವಜನಿಕರಿಂದ ಅಕ್ರಮ ಬೆಟ್ಟಿಂಗ್ ದಂಧೆಗೆ ಸಂಗ್ರಹಿಸಿದ್ದ ಹಣವನ್ನುಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ. ರೂ. 68000/-

ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಐ.ಪಿ.ಎಸ್. ಇವರ ನಿರ್ದೇಶನದಂತೆ ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರುಗಳಾದ ಮಾನ್ಯ ಹನುಮಂತರಾಯ ಐ.ಪಿ.ಎಸ್. (L&O) ಮತ್ತು ಉಮಾ ಪ್ರಶಾಂತ್ (Crime & Traffic) ಇವರ ಮಾರ್ಗದರ್ಶನದಂತೆ ಮಂಗಳೂರು ನಗರ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀನಿವಾಸ್ ಆರ್. ಗೌಡ. ಐ.ಪಿ.ಎಸ್. ಇವರ ನೇತ್ರತ್ವದಲ್ಲಿ ಪಣಂಬೂರು ಪೊಲೀಸ್ ನಿರೀಕ್ಷಕರಾದ ಕೆ. ಸತ್ಯನಾರಾಯಣ, ಮಂಗಳೂರು ಉತ್ತರ ಉಪವಿಭಾಗ ರೌಡಿ ನಿಗ್ರಹದಳದ ಪೊಲೀಸ್ ಉಪ ನಿರೀಕ್ಷಕ ರಾದ ಶೀತಲ್ ಅಲಗೂರು, ರೌಡಿ ನಿಗ್ರಹದಳದ ಎ.ಎಸ್. ಐ. ಮೊಹಮ್ಮದ್, ಕುಶಲ ಮಣಿಯಾಣಿ, ಸತೀಶ್ ಎಂ. ವಿಜಯ ಕಾಂಚನ್, ಇಸಾಕ್, ಶರಣ್ ಕಾಳಿ ಮತ್ತು ಇತರ ಪಣಂಬೂರು ಪೊಲೀಸರಿಂದ ನಡೆದಿರುತ್ತದೆ.


Spread the love