ಕ್ರೀಡಾ ಸಾಧಕರಿಗೆ ಸಂಬಂಧಪಟ್ಟ ವಿವಿಧ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು: ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದ ಕ್ರೀಡಾ ಇಲಾಖೆಯು ಕ್ರೀಡಾ ಸಾಧನೆಗೆ ಸಂಬಂಧಪಟ್ಟಂತೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರಿಗೆ ವಿವಿಧ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜುನ ಪ್ರಶಸ್ತಿ, ರಾಷ್ಟ್ರೀಯ ಕ್ರೀಡಾ ಪೋಷಕ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿಗಳಿಗೆ ವೆಬ್ಸೈಟ್ www.dbtyas.sports.gov ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 28.
ಹೆಚ್ಚಿನ ಮಾಹಿತಿಗೆ ಇಮೇಲ್ Sportsawards-moyas@gov.in (ಟೆ.ನಂ 011-23387432 – 9AM to 5.30 PM) (ಟೋಲ್ ಫ್ರೀ ನಂ: 1800-202-5155, 9AM to 5.30 PM) ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.