ಕ್ರೂಸರ್, ಕ್ಯಾಂಟರ್ ಡಿಕ್ಕಿ- 9 ಮಂದಿ ದಾರುಣ ಸಾವು

Spread the love

ಕ್ರೂಸರ್, ಕ್ಯಾಂಟರ್ ಡಿಕ್ಕಿ- 9 ಮಂದಿ ದಾರುಣ ಸಾವು

ವಿಜಯಪುರ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಕ್ರೂಸರ್-ಕ್ಯಾಂಟರ್ ಡಿಕ್ಕಿಯಾಗಿ 9 ಜನ ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ಚಿಕ್ಕಸಿಂದಗಿ ಬಳಿ ಈ ಘಟನೆ ನಡೆದಿದೆ. ಕ್ರೂಸರ್ ಹಾಗೂ ಕ್ಯಾಂಟರ್ ಪರಸ್ಪರ ಡಿಕ್ಕಿಯಾಗಿದೆ. ಪರಿಣಾಮ 9 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕಲಬುರಗಿ ಜಿಲ್ಲೆಯ ಚಿತ್ತಪೂರದವರು ಎಂದು ಹೇಳಲಾಗುತ್ತಿದೆ.

ಕ್ಯಾಂಟರ್ ಸಿಂದಗಿ ಮೂಲಕ ವಿಜಯಪುರಕ್ಕೆ ಬರುತ್ತಿತ್ತು. ಇತ್ತ ಕ್ರೂಸರ್ ನಲ್ಲಿದ್ದ ಪ್ರಯಾಣಿಕರು ಗೋವಾದಲ್ಲಿ ಪಾರ್ಟಿ ಮುಗಿಸಿ ಹಿಂತಿರುಗುವಾಗ ಈ ಘಟನೆ ನಡೆದಿದೆ. ಅಲ್ಲದೆ ಕ್ರೂಸರ್ ನಲ್ಲಿ 15 ಮಂದಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅದರಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಿಂದಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಿಂದಾಗಿ ವಾಹನ ಸಂಪೂರ್ಣ ನಜ್ಜುಗುಜ್ಜು ಆಗಿದ್ದು, ಪರಿಣಾಮ ಮೃತರ ಗುರುತು ಸಿಗುತ್ತಿಲ್ಲ. ಸದ್ಯ ಈ ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love