ಖುರೇಷಿ ಆರೋಗ್ಯ ಸ್ಥಿರ; ವದಂತಿ ಹಬ್ಬಿಸುವವರ ವಿರುದ್ದ ಕ್ರಮ: ಪೋಲಿಸ್ ಆಯುಕ್ತ ಚಂದ್ರಶೇಖರ್

Spread the love

ಖುರೇಷಿ ಆರೋಗ್ಯ ಸ್ಥಿರ; ವದಂತಿ ಹಬ್ಬಿಸುವವರ ವಿರುದ್ದ ಕ್ರಮ: ಪೋಲಿಸ್ ಆಯುಕ್ತ ಚಂದ್ರಶೇಖರ್

ಮಂಗಳೂರು: ನ್ಯಾಯಾಲಯದ ಆದೇಶದಂತೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಹ್ಮದ್ ಖುರೇಷಿಯ ಆರೋಗ್ಯ ಸ್ಥಿರವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವನ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ನಗರ ಪೋಲಿಸ್ ಆಯುಕ್ತ ಚಂದ್ರಶೇಖರ್ ಎಚ್ಚರಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಹ್ಮದ್ ಖುರೇಷಿಯ ಆರೊಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆಯಲಾಗುತ್ತಿದ್ದು, ಆತನ ಆರೋಗ್ಯ ಸದ್ಯ ಸ್ಥಿರವಾಗಿದೆ ಆದರೂ ಖಾಸಗಿ ಚಾನೆಲ್ ಒಂದರ ಲೋಗೊ ಬಳಸಿ ಆತನ ಆರೋಗ್ಯ ಸ್ಥಿತಿ ಚೆನ್ನಾಗಿಲ್ಲ ಎಂದು ವಂದಂತಿ ಹಬ್ಬಿಸಲಾಗುತ್ತಿದ್ದು ಇದರ ಹಿಂದೆ ಇರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದೇ ಈ ಕಿಡಿಗೇಡಿಗಳ ಉದ್ದೇಶವಾಗಿದೆ ಎಂದರು.

ಅಹ್ಮದ್ ಖುರೇಷ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ. ಡಿಸಿಪಿ ಶಾಂತರಾಜು ನೇತೃತ್ವದ ತಂಡ ಪ್ರತ್ಯೇಕ ತನಿಖೆ ನಡೆಸುತ್ತಿದ್ದು, ಸಿಐಡಿ ತಂಡಕ್ಕೂ ಇಲಾಖೆ ಸಹಕರಿಸಲಿದೆ ಎಂದರು.


Spread the love