ಗಂಗೊಳ್ಳಿಯಲ್ಲಿ ಎರಡು ಅಂಗಡಿಗಳಿಗೆ ಬೆಂಕಿ  – ಲಕ್ಷಾಂತರ ರೂಪಾಯಿ ನಷ್ಟ 

Spread the love

ಗಂಗೊಳ್ಳಿಯಲ್ಲಿ ಎರಡು ಅಂಗಡಿಗಳಿಗೆ ಬೆಂಕಿ  – ಲಕ್ಷಾಂತರ ರೂಪಾಯಿ ನಷ್ಟ 

ಕುಂದಾಪುರ : ಗಂಗೊಳ್ಳಿ ಸಮೀಪದ ವಾಟರ್ ಟ್ಯಾಂಕ್ ಬಳಿ ಇರುವ ಎರಡು ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.

 ಗಂಗೊಳ್ಳಿ ಗ್ರಾಮದ ವಾಟರ್ ಟ್ಯಾಂಕ್ ಬಳಿ ಇರುವ ಜಿ. ದಿನೇಶ್ ನಾಯಕ್ ಮತ್ತು ಜಿ. ಪದ್ಮನಾಭ್ ನಾಯಕ್ ಎಂಬುವರ ಅಂಗಡಿಗೆ   ಬೆಂಕಿ ತಗುಲಿದ್ದು ಬೆಂಕಿಗೆ ಎರಡು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎನ್ನಲಾಗಿದೆ.

ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ಭೀಮಾಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love