ಗಂಗೊಳ್ಳಿ; ಗಾಂಜಾ ಸಾಗಾಟ, ನಾಲ್ವರ ಬಂಧನ

Spread the love

ಗಂಗೊಳ್ಳಿ; ಗಾಂಜಾ ಸಾಗಾಟ, ನಾಲ್ವರ ಬಂಧನ

ಕುಂದಾಪುರ: ಭಟ್ಕಳದಿಂದ ಕುಂದಾಪುರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಗಂಗೊಳ್ಳಿ ಪೊಲೀಸರು ಶುಕ್ರವಾರ ಬಂಧಿಸಿ ಸುಮಾರು 14.45 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಮಂಗಳೂರು ಹರೇಕಳ ನಿವಾಸಿ ಮಹಮ್ಮದ್ ಸಾಕೀರ್(24), ಮಹಮ್ಮದ್ ಜಾಫರ್ (32), ಬೈಂದೂರು ಕಿರಿಮಂಜೇಶ್ವರ ನಿವಾಸಿ ಅಲ್ಫಾಜ್ (20) ಮತ್ತು ಹೊನ್ನಾವರ ನಿವಾಸಿ ಮಹಮ್ಮದ್ ಇಸೂಫ್ ಸಾಫ್ (45) ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ ಭಟ್ಕಳ ಕಡೆಯಿಂದ ಕುಂದಾಪುರ ಕಡೆಗೆ ಹೋಗುವ ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಗಂಗೊಳ್ಳಿ ಪಿ ಎಸ್ ಐ ಭೀಮಾ ಶಂಕರ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮರವಂತೆ ಮಸೀದಿ ಬಳಿ ರಾ.ಹೆ-66ರ ರಸ್ತೆಯ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಪರಿಶೀಲಿಸಿದಾಗ 20 ಗ್ರಾಂ ಗಾಂಜಾ ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ ಗಾಂಜಾ, SAMSUNG DUOS ಕಂಪನಿಯ ಮೊಬೈಲ್, LENOVO VIBE ಕಂಪೆನಿಯ ಮೊಬೈಲ್, VIVO Y9 ಕಂಪೆನಿಯ ಮೊಬೈಲ್, APPLE iPhone X ಮಾದರಿಯ ಮೊಬೈಲ್, CELLECOR ಕಂಪೆನಿಯ ಮೊಬೈಲ್, ಇನ್ಸೂಲೆಟರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 14,45,000/-ರೂ ಆಗಿರುತ್ತದೆ .

ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love