Home Mangalorean News Kannada News ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

Spread the love

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಬಂಟ್ವಾಳ ತಾಲೂಕಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬಬ್ಬನನ್ನು ಪೋಲಿಸರು ಬಂಧಿಸಿದ್ದಾರೆ.

ಬಂಧಿತನನ್ನು ಮಹಮ್ಮದ್ ಇಕ್ಬಾಲ್, ಬಂಟ್ವಾಳ ತಾಲೂಕು ಮುಡಿಪು ದರ್ಕಾಸು ಮನೆ ಎಂದು ಗುರುತಿಸಲಾಗಿದೆ.

ಜೂನ್ 28ರಂದು ಕೊಣಾಜೆ ಪೋಲಿಸ್ ಠಾಣಾ ಅಧಿಕಾರಿ ಮತ್ತು ಸಿಬಂಧಿಯವರು ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಮುಡಿಪು ನವಗ್ರಾಮ ಎಂಬಲ್ಲಿ ಸ್ಕೂಟರಿನಲ್ಲಿ ಬರುತ್ತಿದ್ದ ಮಹಮ್ಮದ್ ಇಕ್ಬಾಲ್ ಎಂಬಾತನ ವಾಹನವನ್ನು ಅಡ್ಡಗಟ್ಟಿದಾಗ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದು ಆತನನ್ನು ಹಿಡಿದು ತಪಾಸಣೆ ನಡೆಸಿದಾಗ ಆತನಲ್ಲಿ 680ಗ್ರಾಂ ಗಾಂಜಾ ಪತ್ತೆಯಾಗಿದ್ದು ಗಾಂಜಾ ಮತ್ತು ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಆತನನ್ನು ವಿಚಾರಣೆ ಂಆಡಿದಾಗ ಮೀಯಪದುವಿನ ಅರ್ಷಾದ್ ಎಂಬಾತನಿಂದ ಖರೀದಿಸಿಕೊಂಡು ಬಂದು ಇಲ್ಲಿ ಯುವಕರಿಗೆ ಮಾರಾಟ ಮಾಡಲು ಕೊಂಡು ಹೋಗುತ್ತಿದ್ದುದಾಗಿ ತಿಳಿಸಿದ್ದು ಮಹಮ್ಮದ್ ಇಕ್ಬಾಲನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.


Spread the love

Exit mobile version