Home Mangalorean News Kannada News ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

Spread the love

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು:  ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳ ನಿವಾಸಿಗಳಾದ ಅಬ್ದುಲ್ ರಹಿಮಾನ್ ಕಡಂಬಾರ್ ಮತ್ತು ಅಬ್ದುಲ್ ಖಾದರ್ ಮಾಡ ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಿಗ್ಗೆ ಬಂಟ್ವಾಳ ತಾಲೂಕು ನರಿಂಗಾನ ಗ್ರಾಮದ ನೆತ್ತಿಲಪದವು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಮಂಜೇಶ್ವರ ಕಡೆಯಿಂದ ಬರುತ್ತಿದ್ದ ಆಟೋರಿಕ್ಷಾ ನಿಲ್ಲದೆ ಪರಾರಿಯಾಗಲು ಯತ್ನಿಸಿದ್ದು, ಬೆನ್ನಟ್ಟಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಇವರುಗಳು ಕೇರಳ ರಾಜ್ಯ ಮಂಜೇಶ್ವರ ಮತ್ತು ಉಪ್ಪಳ ಪರಿಸರದಿಂದ ಗಾಂಜಾವನ್ನು ತಂದು ಇಲ್ಲಿನ ಯುವಕರಿಗೆ ಮಾರಾಟ ಮಾಡುತ್ತಿರುವುದನ್ನು ಒಪ್ಪಿಕೊಂಡಿರುತ್ತಾರೆ. ಬಂಧಿತರಿಂದ 9 ಪ್ಯಾಕೆಟ್ ಗಾಂಜಾ, ರೂ 13000 ಮೌಲ್ಯದ 650 ಗ್ರಾಮ ಗಾಂಜಾ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಆಟೋರಿಕ್ಷಾ ಮತ್ತು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತುಗಳ ಮೌಲ್ಯ ರೂ 93000 ಆಗಿದೆ.


Spread the love

Exit mobile version