ಗಾಂಜಾ ಸೇವನೆ – ನಾಲ್ವರ ಸೆರೆ

Spread the love

ಗಾಂಜಾ ಸೇವನೆ – ನಾಲ್ವರ ಸೆರೆ

ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಿಕಾನ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ಕು ಮಂದಿ ಯುವಕರನ್ನು ಮಂಗಳೂರು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳ ಹಾಗೂ ಉರ್ವ ಠಾಣೆಯ ಪೊಲೀಸರು ಮಂಗಳವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರನ್ನು ಕೊಂಚಾಡಿ ನಿವಾಸಿಗಳಾದ ಸಂಗಮ್ ಶೆಣೈ, ಅತೀಕ್ ಶೆಟ್ಟಿ, ಉರ್ವ ಸ್ಟೋರ್ ನಿವಾಸಿಗಳಾದ ಸಿದ್ದೇಶ್, ಸಾತ್ವಿಕ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇವರ ವಿರುದ್ದ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.


Spread the love