ಗುಡ್ಡ ಜರಿದು ಮೂವರು ಕಾರ್ಮಿಕರು ಮೃತ್ಯು, ಓರ್ವ ಗಂಭೀರ

Spread the love

ಗುಡ್ಡ ಜರಿದು ಮೂವರು ಕಾರ್ಮಿಕರು ಮೃತ್ಯು, ಓರ್ವ ಗಂಭೀರ

ಬಂಟ್ವಾಳ : ಜೆಸಿಬಿ ಮೂಲಕ  ಗುಡ್ಡದ ಬದಿಯಲ್ಲಿ ಮಣ್ಣು ತೆಗೆಯುತ್ತಿದ್ದ ವೇಳೆ ಧರೆ ಜರಿದು ಮೂವರು ಕಾರ್ಮಿಕರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಒಡಿಯೂರು ಎಂಬಲ್ಲಿ ನಡೆದಿದೆ.

ಇಲ್ಲಿನ ವಿಟ್ಲ, ಕಸಬಾ ನಿವಾಸಿಗಳಾದ ರಮೇಶ್, ಪ್ರಕಾಶ್, ಬಾಳಪ್ಪ ಮೃತ ಕಾರ್ಮಿಕರಾಗಿದ್ದು, ಪ್ರಭಾಕರ ಗಂಭೀರ ಗಾಯಗೊಂಡವರು ಎಂದು ತಿಳಿದು ಬಂದಿದೆ.

ಶ್ರೀ ಕ್ಷೇತ್ರ ಒಡಿಯೂರು ದೇವಸ್ಥಾನಕ್ಕೆ ಸೇರಿದ ಅನ್ನಛತ್ರದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು ಎನ್ನಲಾಗಿದೆ. ಈ ಮೊದಲು ಗುಡ್ಡವೊಂದನ್ನು ಜೆಸಿಬಿ ಮೂಲಕ ಮಣ್ಣು ತೆಗೆಯಲಾಗಿತ್ತು. ಇದೀಗ ಕಟ್ಟಡದ ಕಾಮಗಾರಿಗೆ ಜೆಸಿಬಿ ಮೂಲಕ ಪಿಲ್ಲರ್ ಗುಂಡಿ ಅಗೆಯಲಾಗುತ್ತಿದ್ದು, ಈ ವೇಳೆ ಆಕಸ್ಮಿಕವಾಗಿ ಧರೆ ಜರಿದು, ಪಿಲ್ಲರ್ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಈ ವೇಳೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಣ್ಣಿನಲ್ಲಿ ಸಿಲುಕಿದ್ದ ಇನ್ನೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾರೆ .

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

 


Spread the love