ಗುರುಪುರ ಅಡ್ಡೂರಿನಲ್ಲಿ ಮಾಜಿ ಶಾಸಕ ಐವನ್ ಡಿ ಸೋಜರವರ ಅನುದಾನದಿಂದ ರಿಕ್ಷಾ ತಂಗುದಾಣ ಉದ್ಘಾಟನೆ 

Spread the love

ಗುರುಪುರ ಅಡ್ಡೂರಿನಲ್ಲಿ ಮಾಜಿ ಶಾಸಕ ಐವನ್ ಡಿ ಸೋಜರವರ ಅನುದಾನದಿಂದ ರಿಕ್ಷಾ ತಂಗುದಾಣ ಉದ್ಘಾಟನೆ 

ಗುರುಪುರ ಅಡ್ಡೂರಿನಲ್ಲಿ 160ಕ್ಕೂ ಅಧಿಕ ರಿಕ್ಷಾ ಚಾಲಕರು ಪಾರ್ಕಿನ ಮೇಲ್ಛಾವಣಿ ಇಲ್ಲದೆ ಬಿಸಿಲಿನಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು, ಇವರ ಅನುಕೂಲಕ್ಕಾಗಿ ಸರಕಾರದ ಮುಖ್ಯ ಸಚೇತಕ ಮತ್ತು ಮಾಜಿ ಶಾಸಕ ಐವನ್ ಡಿ ಸೋಜರವರು ಇವರ ನಿಧಿಯಿಂದ ಸುಮಾರು ಎರಡುವರೆ ಲಕ್ಷ ರೂ. ವೆಚ್ಚದ ರಿಕ್ಷಾ ನಿಲ್ದಾಣವನ್ನು ನಿರ್ಮಿಸಿ ಕೊಡಲಾಗಿತ್ತು. ಇದನ್ನು  ಐವನ್ ಡಿ ಸೋಜರವರು ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಮೊಹಿದ್ದೀನ್ ಬಾವರವರು ವಹಿಸಿದ್ದು, ಅಭಿವೃದ್ಧಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿದ್ದು, ಕ್ಷೇತ್ರದ ಮೂಲೆ ಮೂಲೆಗಳಲ್ಲಿ ಕಾಂಕ್ರೀಟಿಕರಣ ರಸ್ತೆಗಳನ್ನು ನಿರ್ಮಿಸಲಾಗಿದ್ದು, ಅಭಿವೃದ್ಧಿಗೆ ಶ್ರಮಿಸಬೇಕೆಂದು ಮಾತನಾಡಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಯು.ಪಿ.ಇಬ್ರಾಹಿಂ, ತಾಲೂಕು ಅಧ್ಯಕ್ಷ ಸಚಿನ್ ನಡಪ, ಸುನಿಲ್ ಪೂಜಾರಿ, ತಾಲೂಕು ಗ್ರಾಮ ಪಂಚಾಯತ್ ಅಧ್ಯಕ್ಷ ರುಕ್ಯಾ, ಗ್ರಾಮಾ ಪಂಚಾಯತ್ ಮಾಜಿ ಸದಸ್ಯರುಗಳು, ರಿಕ್ಷಾ ಚಾಲನೆಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಾರಂಭದಲ್ಲಿ ರಿಕ್ಷಾ ಚಾಲಕರಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.


Spread the love