ಗೋಶಾಲೆಗಳ ಅಭಿವೃದ್ಧಿಗೆ ಸಹಕಾರಿ ಸಂಸ್ಥೆಗಳ ಲಾಭಾಂಶದಲ್ಲಿ 0.5% ಮೊತ್ತವನ್ನು ಮೀಸಲಿರಿಸಲು  ಸಚಿವರಿಗೆ ಮನವಿ : ಯಶ್‍ ಪಾಲ್ ಸುವರ್ಣ

Spread the love

ಗೋಶಾಲೆಗಳ ಅಭಿವೃದ್ಧಿಗೆ ಸಹಕಾರಿ ಸಂಸ್ಥೆಗಳ ಲಾಭಾಂಶದಲ್ಲಿ 0.5% ಮೊತ್ತವನ್ನು ಮೀಸಲಿರಿಸಲು  ಸಚಿವರಿಗೆ ಮನವಿ : ಯಶ್‍ ಪಾಲ್ ಸುವರ್ಣ

ಉಡುಪಿ: ಕೊರೋನಾ ಸಂಕಷ್ಟದಿಂದ ತೀರಾ ವೆಚ್ಚದಾಯಕವಾದ ಗೋಶಾಲೆಗಳ ನಿರ್ವಹಣೆ ತೀವ್ರ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಗಂಭೀರ ಸಮಸ್ಯೆಯನ್ನು ಪರಿಹರಿಸಿ ಗೋಶಾಲೆಗಳಿಗೆ ಆರ್ಥಿಕಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಸಹಕಾರಿ ಇಲಾಖೆ ವಿಶೇಷ ಮುತುವರ್ಜಿ ವಹಿಸಿ ರಾಜ್ಯದ ಸಹಕಾರಿ ಇಲಾಖೆಗೆ ಒಳಪಟ್ಟಿರುವ ಸಹಕಾರಿ ಸಂಸ್ಥಗಳ ಲಾಭಾಂಶದಲ್ಲಿ 0.5% ನಿಧಿಯನ್ನು ಸರಕಾರದಿಂದ ನೊಂದಾಯಿಸ¯್ಪಟ್ಟ ಗೋಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಆದೇಶ ಹೊರಡಿಸುವಂತೆ ಸಹಕಾರಿ ಸಚಿವರಾದ  ಎಸ್. ಟಿ. ಸೋಮಶೇಖರ್ ರವರಿಗೆ ಮನವಿ ಸಲ್ಲಿಸಿರುರುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ ಪಾಲ್ ಸುವರ್ಣ ತಿಳಿಸಿದ್ದಾರೆ.

ಭಾರತದ ಸಂಸ್ಕøತಿಯಲ್ಲಿ ಗೋವುಗಳಿಗೆ ಪ್ರಧಾನ ಪಾತ್ರವಿದೆ. ಹಲವಾರು ಕಾರಣಗಳಿಂದ ಅನಾಥವಾಗುವ ಗೋವುಗಳ ರಕ್ಷಣೆಯ ಸದುದ್ದೇಶದಿಂದ ನಮ್ಮ ರಾಜ್ಯದಲ್ಲಿ ಹಲವಾರು ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಸರಕಾರ ಗೋ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದರೂ, ಗೋಶಾಲೆಗಳು ಆರ್ಥಿಕವಾಗಿ ತೀರ ಸಂಕಷ್ಟ ಪರಿಸ್ಥಿತಿಯಲ್ಲಿ ಗೋರಕ್ಷಣೆಯ ಸೇವೆಯಲ್ಲಿ ತೊಡಗಿಸಿಕೊಂಡಿದೆ.

ಈಗಾಗಲೇ ಈ ಮಹತ್ವದ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಗೋಶಾಲೆಗಳಿಗೆ ಆರ್ಥಿಕ ಚೈತನ್ಯ ನೀಡುವ ಉದ್ದೇಶದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ 2% ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಆದೇಶ ನೀಡಲಾಗಿದ್ದು. ಸಹಕಾರಿ ಇಲಾಖೆಯ ಮೂಲಕವೂ ಸಹಕಾರಿ ಸಂಸ್ಥೆಗಳ ಲಾಭಾಂಶದಲ್ಲಿ 0.5% ನಿಧಿಯನ್ನು ಗೋಶಾಲೆ ಅಭಿವೃದ್ಧಿಗೆ ಮೀಸಲಿರಿಸುವ ಬಗ್ಗೆ ಆದೇಶ ನೀಡಿದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನದ ಸಂಗ್ರಹವಾಗಲಿದ್ದು ಈ ಮೂಲಕ ಗೋಸಂರಕ್ಷಣೆಯಲ್ಲಿ ನಿರತವಾಗಿರುವ ಗೋಶಾಲೆಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love