ಗ್ರಾಪಂ ಚುನಾವಣೆ ಪೂರ್ವಭಾವಿಯಾಗಿ ತೆಂಕನಿಡಿಯೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the love

ಗ್ರಾಪಂ ಚುನಾವಣೆ ಪೂರ್ವಭಾವಿಯಾಗಿ ತೆಂಕನಿಡಿಯೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ

ಉಡುಪಿ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗೆ ಪೂರ್ವಭಾವಿಯಾಗಿ ತೆಂಕನಿಡಿಯೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಕಾಂಗ್ರೆಸ್ ಪಕ್ಷದ ಇತ್ತೀಚಿನ ಜನಪರ ಕಾರ್ಯಕ್ರಮಗಳು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುನಃ ಎಲ್ಲಾ ಗ್ರಾಮ ಪಂಚಾಯತ್ ಗಳು ಗೆದ್ದು ಬರಲು ಸಹಕಾರಿಯಾಗಲಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ತೋನ್ಸೆ ಮಾತನಾಡಿ ಜಿಲ್ಲಾ ಪಂಚಾಯತ್ ವತಿಯಿಂದ ಬರಬೇಕಾದ ಎಲ್ಲಾ ಅನುದಾನಗಳನ್ನು ಸಮರ್ಪಕ ರೀತಿಯಲ್ಲಿ ಗ್ರಾಮಗಳಿಗೆ ನೀಡಿದ್ದೇನೆ. ಈಗ ಈ ಗ್ರಾಮದ ಸ್ಮಶಾನಕ್ಕೆ ರೂ 2 ಲಕ್ಷ ಅನುದಾನ ನೀಡಿದ್ದು ಹಾಗೂ ಪ್ರತಾಪ್ ಚಂದ್ರ ಶೆಟ್ಟಿಯವರ ಎಮ್ ಎಲ್ ಸಿ ಅನುದಾನ ಕೂಡಇಲ್ಲಿನ ಸ್ಮಶಾನಕ್ಕೆ ನೀಡಿದ್ದಾರೆ ಎಂದು ಹೇಳಲು ಹೆಮ್ಮೆಪಡುತ್ತೇನೆ ಎಂದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ತೆಂಕನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮಾತನಾಡಿ ಈ ಗ್ರಾಮದ ಜನ ಬುದ್ದಿವಂತರಾಗಿದ್ದು ಗ್ರಾಮದ ಅಭಿವೃದ್ಧಿಗಾಗಿ ಈ ಬಾರಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಮೂಲಕ ಈ ಬಾರಿಯ ಗ್ರಾಮ ಪಂಚಾಯತ್ ಕಾಂಗ್ರೆಸ್ ಆಡಳಿತಕ್ಕೆ ತರಲು ಒಲವು ತೋರಿದ್ದಾರೆ. ನಮ್ಮ ಆಡಳಿತದಿಂದ ನಮ್ಮ ಗ್ರಾಮ ಅಭಿವೃದ್ಧಿಗೆ ಪೂರಕವಾಗಿದೆ. ನಮ್ಮ ವೀರಮಾರುತಿ ವ್ಯಾಯಾಮ ಶಾಲೆ ಹಾಗೂ ಗ್ರಾಮಸ್ಥರ ಪ್ರತಿಭಟನೆ ಹಾಗೂ ಹೋರಾಟದ ಫಲವಾಗಿ ವ್ಯಾಯಾಮ ಶಾಲೆಯ ರಸ್ತೆ ಕಾಮಗಾರಿ ಈಗ ಪ್ರಾರಂಭವಾಗಿದೆ ಎಂದು ಹೇಳಲು ಸಂತೋಷವಾಗುತ್ತದೆ.

ಕಾಂಗ್ರೆಸ್ ನಾಯಕರಾದ ಭಾಸ್ಕರ್ ರಾವ್ ಕಿದಿಯೂರು, ಜಯಾನಂದ, ಜನಾರ್ದನ ಭಂಡಾರ್ಕಾರ್, ಗೋಪಾಲಕೃಷ್ಣ ಶೆಟ್ಟಿ, ಧನಂಜಯ ಕುಂದರ್, ಪ್ರಥ್ವಿರಾಜ್ ಶೆಟ್ಟಿ, ರಾಜೇಶ್ ನಾಯಕ್, ಅವಿನಾಶ್, ರೆಹಮಾನ್, ಶಶಿಕಾಂತ್ ಸತೀಶ್ ನಾಯಕ್, ಭವಾನಿ ಪೂಜಾರಿ, ಕೃಷ್ಣ ಎಸ್ ಅಮೀನ್, ಮಮತಾ ಶೆಟ್ಟಿ, ಸಂಪತ್ ಶೆಟ್ಟಿ, ವಸಂತ್ ಪ್ರಭಾಕರ್ ಅಂಚನ್,ಗೋಪಾಲ್ ಗಾಣಿಗ, ನಾರಾಯಣ ಕೋಟ್ಯಾನ್ ಶಶಿಧರ್, ವಿಲ್ಫ್ರೇಡ್, ಸುರೇಶ್ ಕುಮಾರ್, ಶರತ್ ಶೆಟ್ಟಿ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love