ಚಿನ್ನಾಭರಣ ದರೋಡೆ ಮಾಡಿದ ಆರೋಪಿಗಳ ಬಂಧನ

Spread the love

ಚಿನ್ನಾಭರಣ ದರೋಡೆ ಮಾಡಿದ ಆರೋಪಿಗಳ ಬಂಧನ

ಉಡುಪಿ: ರಾತ್ರಿ ವೇಳೆ ಮನೆಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಹೆಂಗಸರಿಗೆ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ ಮಾಡಿದ ಆರೋಪಿಗಳನ್ನು ಡಿಸಿಐಬಿ ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಮಣಿಪಪುರ ನಿವಾಸಿ ಅಜಯ್ ಕುಮಾರ್ @ ಅಣ್ಣು (30) ಮತ್ತು ಕೊಡಂಕೂರು ನಿವಾಸಿ ವಿಕ್ರಮ್ ಕುಂದರ್ (23) ಎಂದು ಗುರುತಿಸಲಾಗಿದೆ.

ಉಡುಪಿ ಜೋಡುಕಟ್ಟೆಯ ಬಳಿ ಸುಗಂಧ ವಿಹಾರ್ ಎಂಬ ಮನೆಯಲ್ಲಿ ದಿನಾಂಕ 18/01/2018 ರಂದು ರಾತ್ರಿವೇಳೆ ಅಕ್ರಮ ಪ್ರವೇಶ ಮಾಡಿ, ಮನೆಯಲ್ಲಿದ್ದ ಹೆಂಗಸರಿಗೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಮಾರ್ಚ್ 27 ರಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಲಕ್ಷ್ಮಣ ಬ. ನಿಂಬರಗಿ ಐ.ಪಿ.ಎಸ್ ರವರ ನಿರ್ದೇಶನದಲ್ಲಿ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕುಮಾರ ಚಂದ್ರ ಕೆ.ಎಸ್.ಪಿ.ಎಸ್ ಮತ್ತು ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಟಿ.ಆರ್.ಜೈಶಂಕರ್ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಉಡುಪಿ ಡಿ.ಸಿ.ಐ.ಬಿ ಇನ್‌ಸ್ಪೆಕ್ಟರ್ ಸಂಪತ್ ಕುಮಾರ್ ಎ ರವರು ಸಿಬ್ಬಂದಿಯವರೊಂದಿಗೆ ಆರೋಪಿಗಳನ್ನು ಬಂಧಿಸಿ ದರೋಡೆ ಮಾಡಿದ್ದ ಹಣದಲ್ಲಿ ಖರೀದಿಸಿದ್ದ ಗೋಲ್ಡನ್ ಬಣ್ಣದ lephone ಕಂಪೆನಿಯ ಮೊಬೈಲ್ ಫೋನ್‌ನ್ನು  ಸ್ವಾಧೀನಪಡಿಸಿಕೊಂಡು  ಉಡುಪಿ ನಗರ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ವಿಕ್ರಮ್ ಕುಂದರ್ ಎಂಬವನು ಈ ಹಿಂದೆ ಭಟ್ಕಳದಲ್ಲಿ ಕಳವು ಪ್ರಕರಣದ ಆರೋಪಿಯಾಗಿದ್ದು, ಅಲ್ಲದೇ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ಶಿವಳ್ಳಿ ಗ್ರಾಮದ ಹಯಗ್ರೀವ ನಗರ ಎಂಬಲ್ಲಿರುವ ಭಾಸ್ಕರ ಶೆಟ್ಟಿ ಎಂಬವರ ಮನಯಲ್ಲಿ ಕಳ್ಳತನ ನಡೆಸಿದ ಪ್ರಕರಣದ ಆರೋಪಿಯಾಗಿರುತ್ತಾನೆ.

ಈ ಕಾರ್ಯಾಚರಣೆಯಲ್ಲಿ ಡಿ.ಸಿ.ಐ.ಬಿ ಘಟಕದ ಎಎಸ್‌ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ಪ್ರವೀಣ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ರವರು ಸಹಕರಿಸಿರುತ್ತಾರೆ.


Spread the love