ಛತ್ತೀಸ್ ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ: ಭಾರತೀಯ ಕ್ರೈಸ್ತ ಒಕ್ಕೂಟ ಖಂಡನೆ

Spread the love

ಛತ್ತೀಸ್ ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ: ಭಾರತೀಯ ಕ್ರೈಸ್ತ ಒಕ್ಕೂಟ ಖಂಡನೆ

ಉಡುಪಿ: ಛತ್ತೀಸ್ ಗಢದಲ್ಲಿ ಇಬ್ಬರು ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರನ್ನು ಸುಳ್ಳು ಕಾರಣವನ್ನು ನೀಡಿ ಬಂಧಿಸಿರುವ ಅಲ್ಲಿನ ರಾಜ್ಯ ಸರಕಾರದ ಕ್ರಮವನ್ನು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ತೀವ್ರವಾಗಿ ಖಂಡಿಸಿದ್ದು ಪ್ರಧಾನಿ ಮೋದಿ ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಕ್ರೈಸ್ತ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ಛತ್ತೀಸ್ ಗಢದಲ್ಲಿ ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕ್ಯುಲೇಟ್ ಆಫ್ ಅಸ್ಸಿಸಿಯ ಸದಸ್ಯರಾದ ತಲಶ್ಶೇರಿಯ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಅಂಗಮಾಲಿಯ ಸಿಸ್ಟರ್ ಪ್ರೀತಿ ಮೇರಿ ಎಂಬ ಇಬ್ಬರು ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರನ್ನು ಕೆಲವೊಂದು ಸಂಘಟನೆಗಳ ಸುಳ್ಳು ಆರೋಪಗಳ ಮೇಲೆ ಮಾನವ ಕಳ್ಳಸಾಗಣೆ ಮತ್ತು ಧಾರ್ಮಿಕ ಮತಾಂತರದ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ ಬಂಧಿತ ಕ್ರೈಸ್ತ ಸನ್ಯಾಸಿನಿಯರು ಮಹಿಳೆಯರನ್ನು ಅವರ ಪೋಷಕರಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಆಗ್ರಾದ ಕಾನ್ವೆಂಟ್ ಗಳಲ್ಲಿ ಮನೆಕೆಲಸಕ್ಕಾಗಿ ಕರೆದೊಯ್ಯುತ್ತಿದ್ದರು.

ಲಭ್ಯ ಮಾಹಿತಿಗಳ ಪ್ರಕಾರ ಬಂಧಿತ ಸನ್ಯಾಸಿನಿಯರನ್ನು ಭೇಟಿ ಮಾಡಲು ಯಾವುದೇ ಚರ್ಚ್ ಪ್ರತಿನಿಧಿಗಳಿಗೆ ಅವಕಾಶ ನೀಡಲಾಗಿಲ್ಲ ಅಲ್ಲದೆ ಯುವತಿಯರನ್ನು ಅವರ ಹೇಳಿಕೆಗಳನ್ನು ಬದಲಾಯಿಸುವಂತೆ ಒತ್ತಾಯಿಸಲಾಗಿದೆ. ಅವರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಕರೆದೊಯ್ಯಲಾಗುತ್ತಿದೆ ಎಂದು ಹೇಳುವಂತೆ ಅವರನ್ನು ಒತ್ತಾಯಿಸಲಾಗಿದೆ. ಆದರೆ ಇಲ್ಲೆ ಯಾವುದೇ ಬಲವಂತ ಅಥವಾ ಮತಾಂತರ ನಡೆದಿಲ್ಲ.

ಉತ್ತರ ಭಾರತ ಸೇರಿದಂತೆ ದೇಶದಲ್ಲಿ ಕ್ರೈಸ್ತ ಸಮುದಾಯದ ಮೇಲೆ ಬಲಪಂಥೀಯ ಗುಂಪುಗಳಿಂದ ಕಿರುಕುಳ ಹೆಚ್ಚಾಗುತ್ತಿದ್ದು ಗುಂಪು ಹಿಂಸಾಚಾರ, ಪೊಲೀಸ್ ಪ್ರಕರಣಗಳು ಮತ್ತು ಚರ್ಚ್ ನಡೆಸುವ ಸಂಸ್ಥೆಗಳ ಮೇಲಿನ ದಾಳಿಗಳು ಆಗಾಗ ನಡೆಯುತ್ತಿವೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಗಳು ಮೌನವಾಗಿರುವುದರಿಂದ ಆ ರೀತಿಯ ಘಟನೆಗಳು ಇನ್ನೂ ಹೆಚ್ಚಲು ಕಾರಣವಾಗಿದೆ. ಈ ಘಟನೆ ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರ ಮೇಲೆ ವ್ಯವಸ್ಥಿತ ಕಿರುಕುಳದ ಅಪಾಯಕಾರಿದೆ. ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (UCF) ಮಾಹಿತಿ ಪ್ರಕಾರ, ಕ್ರಿಶ್ಚಿಯನ್ನರನ್ನು ಗುರಿಯಾಗಿಸಿ ನಡೆಯುವ ಘಟನೆಗಳು ಹೆಚ್ಚುತ್ತಲೇ ಇವೆ. 2014 ರಲ್ಲಿ ಅಂಥ 127 ಪ್ರಕರಣಗಳು ವರದಿಯಾಗಿದ್ದವು. 2024 ರಲ್ಲಿ 834 ಕ್ಕೆ ಏರಿದೆ. ಇದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ವ್ಯವಸ್ಥಿತ ಮತ್ತು ಹೆಚ್ಚುತ್ತಿರುವ ಅಪಾಯವಾಗಿದೆ.

ಸಬಕಾ ಸಾಥ್ ಸಬ್ಕಾ ವಿಕಾಸ್ ಎನ್ನುವ ಧ್ಯೇಯದೊಂದಿಗೆ ಅಧಿಕಾರ ನಡೆಸುತ್ತಿರುವ ದೇಶದ ಪ್ರಧಾನಿಯವರು ಇಬ್ಬರು ಸನ್ಯಾಸಿನಿಯರ ಬಿಡುಗಡೆಗೆ ತಕ್ಷಣ ಮಧ್ಯಪ್ರವೇಶಿಸುವಂತೆ ಅವರ ಬಿಡುಗಡೆಗೆ ಕಾನೂನು ಬೆಂಬಲ ನೀಡಬೇಕೆಂದು ಹಾಗೂ ಕ್ರೈಸ್ತ ಸಮುದಾಯದ ಸಂಸ್ಥೆಗಳಿಗೆ ಬಲಪಂಥಿಯ ಸಂಘಟನೆಗಳಿಂದ ನಡೆಯುತ್ತಿರುವ ದೌರ್ಜನ್ಯಗಳನ್ನು ನಿಲ್ಲಿಸುವಂತೆ ಪ್ರಶಾಂತ್ ಜತ್ತನ್ನ ಅವರು ಮಾಧ್ಯಮ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments