ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

Spread the love

ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಮಂಗಳೂರು :ಕೆಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಜಿ ಕೇಂದ್ರ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿಯವರನ್ನು ಬಂಟ್ವಾಳದಲ್ಲಿರುವ ಅವರ ನಿವಾಸದಲ್ಲಿ ಇತರ ಕಾಂಗ್ರೆಸ್ ಮುಖಂಡರೊಂದಿಗೆ ಭೇಟಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಜನಾರ್ದನ ಪೂಜಾರಿಯವರಿಗೆ ಆಹ್ವಾನವಿತ್ತಾದರೂ ಅನಾರೋಗ್ಯದ ನಿಮಿತ್ತ ಭಾಗವಹಿಸಿರಲಿಲ್ಲ. ಪ್ರಸ್ತುತ ಮಂಗಳೂರು ಪ್ರವಾಸದಲ್ಲಿರುವ ಡಿ ಕೆ ಶಿವಕುಮಾರ್ ಸ್ವತಃ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವೇಳೆ ಪಕ್ಷದ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಹಾಗೂ ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.


Spread the love