ಜೆ.ಡಿ.ಎಸ್ ಪಕ್ಷದ ಸದಸ್ಯತ್ವಕ್ಕೆ ಪ್ರಮೋದ್ ಮಧ್ವರಾಜ್ ರಾಜೀನಾಮೆ

Spread the love

ಜೆ.ಡಿ.ಎಸ್ ಪಕ್ಷದ ಸದಸ್ಯತ್ವಕ್ಕೆ ಪ್ರಮೋದ್ ಮಧ್ವರಾಜ್ ರಾಜೀನಾಮೆ

ಉಡುಪಿ: ಮಾಜಿ ಸಚಿವ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ಜೆಡಿಎಸ್ ಪಕ್ಷದ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜಿನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಜೆಡಿಎಸ್ ಪಕ್ಷದ ರಾಜ್ಯಧ್ಯಕ್ಷರಾದ ಎಚ್ ಕೆ ಕುಮಾರಸ್ವಾಮಿಯವರಿಗೆ ಪತ್ರ ಬರೆದಿರುವ ಅವರು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೆ. ಈ ವಿಷಯವನ್ನು ಕಾಂಗ್ರೆಸ್ ಪಕ್ಷದ ವರಿಷ್ಟರಲ್ಲಿಯೂ ಚರ್ಚಿಸಿದ್ದೆ ಆ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದರಿಂದ ತಾನು ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಬೇಕಾಯಿತು. ಆ ಸಂದರ್ಭ ಜೆಡಿಎಸ್ ನಿಡಿದ್ದ ಬಿ ಫಾರಂನಲ್ಲಿ ಪಕ್ಷದ ಸದಸ್ಯನೆಂದು ನಮೂದಿಸಲ್ಪಟ್ಟಿತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಪದಾಧಿಕಾರಿಗಳು ತನಗೆ ಲೋಕಸಭಾ ಚುನಾವಣೆಯ ಸಂದರ್ಭ ಸಂಪೂರ್ಣ ಬೆಂಬಲ ನೀಡಿದ್ದರು.

ಇದೀಗ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ಇಲ್ಲದಿರುವುದರಿಂದ ತನಾಉ ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೆನೆ ಎಂದು ಅವರು ತಿಳಿಸಿದ್ದಾರೆ.


Spread the love

1 Comment

Comments are closed.