ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭ ಯಶಸ್ವಿಗೊಳಿಸಿ – ಸಲೀಂ ಅಹಮ್ಮದ್

Spread the love

ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭ ಯಶಸ್ವಿಗೊಳಿಸಿ – ಸಲೀಂ ಅಹಮ್ಮದ್

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ.ಸಲೀಂ ಅಹಮ್ಮದ್ ರವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಶುಕ್ರವಾರದಂದು ಭೇಟಿ ನೀಡಿ ಜಿಲ್ಲಾ ಕಾಂಗ್ರೆಸ್ನ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು, ಜಿಲ್ಲಾ ಘಟಕದ ಅಧ್ಯಕ್ಷರುಗಳು , ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಸದಸ್ಯರುಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಜೇತ ಅಭ್ಯರ್ಥಿಗಳು ಮತ್ತು ಪಕ್ಷದ ನಾಯಕರೊಡನೆ ಚರ್ಚೆ ನಡೆಸಿ ದಿ: 07-06-2020 ರಂದು ನಡೆಯುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ.ಡಿ.ಕೆ.ಶಿವಕುಮಾರ್ ರವರ ಪದಗ್ರಹಣ ಸಮಾರಂಭದ ಬಗ್ಗೆ ತಿಳುವಳಿಕೆ ನೀಡಿ ಈ ಸಮಾರಂಭವನ್ನು ಯಶಸ್ವಿಯಾಗಿ ಪ್ರತೀ ಬ್ಲಾಕ್ ಮಟ್ಟದಲ್ಲಿ ನಡೆಯುವಂತೆ ಜವಾಬ್ದಾರಿವಹಿಸಿಕೊಳ್ಳುವುದು ಮತ್ತು ಪಕ್ಷದ ನಾಯಕರುಗಳು ಒಟ್ಟಾಗಿ ಪಕ್ಷದ ಸಂಘಟನೆಗೆ ದುಡಿದು ತಳಮಟ್ಟದಲ್ಲಿಯೇ ಪಕ್ಷದ ಸಂಘಟನೆ ನಡೆಸಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಕಾರ್ಯ ಪ್ರವ್ರತ್ತರಾಗಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಬಳಿಕ ಈ ಸಭೆಯಲ್ಲಿ ದ.ಕ.ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಶ್ರೀ.ಬಿ.ರಮಾನಾಥ ರೈ, ವಿಧಾನ ಪರಿಷತ್ ಶಾಸಕರಾದ ಐವಾನ್ ಡಿ’ಸೋಜ, ಮಾಜಿ ಶಾಸಕಿ ಶ್ರೀಮತಿ ಶಕುಂತಲ ಶೆಟ್ಟಿ , ಮಾಜಿ ಶಾಸಕರಾದ ಶ್ರೀ.ಜೆ.ಆರ್.ಲೋಬೊ , ಶ್ರೀ.ಮೊಹಿದ್ದೀನ್ ಬಾವಾ , ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ.ಮಿಥುನ್ ರೈ ಮುಂತಾದ ನಾಯಕರು ಮಾತನಾಡಿ ದಿ:07-06-2020 ರಂದು ನಡೆಯುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕಾಗಿ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಾರಾದ ಶ್ರೀ.ಕೆ.ಹರೀಶ್ ಕುಮಾರ್ ರವರು ಸ್ವಾಗತಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು .ಈ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಮಾಜಿ ಸಂಸದರಾದ ಬಿ. ಇಬ್ರಾಹಿಂ, ಮಾಜಿ ಶಾಸಕರಾದ ಅಭಯಚಂದ್ರ ಜೈನ್ , ಜಿ.ಎ.ಬಾವಾ , ಮಂಜುನಾಥ ಭಂಡಾರಿ , ಕೋಡಿಜಾಲ್ ಇಬ್ರಾಹಿಂ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ನ ಕೋಶಾಧಿಕಾರಿ ಶಶಿಧರ್ ಹೆಗ್ಡೆಯವರು ವಂದಿಸಿದರು.


Spread the love