Home Mangalorean News Kannada News ಡಿಸಿಎಮ್ ಪರಮೇಶ್ವರ್ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ವಾಗತ

ಡಿಸಿಎಮ್ ಪರಮೇಶ್ವರ್ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ವಾಗತ

Spread the love

ಡಿಸಿಎಮ್ ಪರಮೇಶ್ವರ್ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ವಾಗತ

ಉಡುಪಿ: ರಾಜ್ಯದ ಸಮ್ಮಿಶ್ರ ಸರಕಾರ ಉಪ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಉತ್ತರಕನ್ನಡ ಜಿಲ್ಲೆಭೇಟಿಗಾಗಿ ಆಗಮಿಸಿದ ಡಾ| ಜಿ ಪರಮೇಶ್ವರ್ ಅವರು  ಸಾಗುವ ದಾರಿಯಲ್ಲಿ ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಡೆ ಅವರು ಅಂಬಲಪಾಡಿ ಬೈಪಾಸ್ ಬಳಿ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ಸದಸ್ಯೆ ವೆರೋನಿಕಾ ಕರ್ನೆಲಿಯೊ, ಕಾಂಗ್ರೆಸ್ ನಾಯಕರಾದ ಕಿಶನ್ ಹೆಗ್ಡೆ ಕೊಳಕೆಬೈಲು, ಸತೀಶ್ ಅಮೀನ್ ಪಡುಕೆರೆ, ಕುಶಲ ಶೆಟ್ಟಿ, ಕೀರ್ತಿ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version