ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭ – ಬ್ರಹ್ಮಾವರ ಬ್ಲಾಕ್ ಪೂರ್ವಭಾವಿ ಸಭೆ

Spread the love

ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭ – ಬ್ರಹ್ಮಾವರ ಬ್ಲಾಕ್ ಪೂರ್ವಭಾವಿ ಸಭೆ

ಉಡುಪಿ: ಕೆಪಿಸಿಸಿ ನೂತನ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭದ ನಿಮಿತ್ತವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಾಜಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿಯವರ ನೇತೃತ್ವದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸಿನ ಪೂರ್ವ ಭಾವಿ ಸಭೆ ಜರುಗಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಡಿ ಕೆ ಶಿವಕುಮಾರ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ದಿನದಿಂದ ಕಾರ್ಯಕರ್ತರು ಹುರುಪಿನಲ್ಲಿದ್ದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಮುನ್ಸೂಚನೆ ಎಂದರು.

ಮಾಜಿ ಶಾಸಕ ಯು ಆರ್ ಸಭಾಪತಿ ಮಾತನಾಡಿ ಡಿಕೆ ಶಿವಕುಮಾರ್ ಅವರ ಮಾರ್ಗದರ್ಶನದಿಂದ ಟಾಸ್ಕ್ ಫೋರ್ಸ್ ಅಧ್ಯಕ್ಷನಾಗಿ ಸಮರ್ಪಕವಾಗಿ ಜನರ ಸೇವೆ ಮಾಡಲು ಸಾಧ್ಯವಾಯಿತು ಎಂದರು.

ಕೆಪಿಸಿಸಿ ಉಸ್ತುವಾರಿ ಸತೀಶ್ ಅವರು ಮಾತನಾಡಿ ಡಿಕೆ ಶಿವಕುಮಾರ್ ಪದಗ್ರಹಣದ ಕಾರ್ಯಕ್ರಮದ ರೂಪುರೇಶೆಗಳ ಬಗ್ಗೆ ಮಾಹಿತಿ ನೀಡಿದರು.

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮಾತನಾಡಿ ಡಿ ಕೆ ಶಿವಕುಮಾರ್ ಅವರ ಮುಂದಿನ ನಡೆಗಳು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆ ಹಾಗೂ ಎಲ್ಲಾ ಚುನಾವಣೆಗಳು ಗೆದ್ದು ಪುನಃ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಹಾಗೂ ಡಿಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಯಶಸ್ವಿಯಾಗಿ ನಡೆಯಲಿದೆ ಎಂದರು.

ಈ ವೇಳೆ ಕೆ ಪಿಸಿಸಿ ಸದಸ್ಯರಾದ ವೆರೋನಿಕಾ ಕರ್ನೆಲಿಯೊ, ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ನಾಯಕರಾದ ಭುಜಂಗ ಶೆಟ್ಟಿ, ಯತೀಶ್ ಕರ್ಕೇರಾ, ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಹರೀಶ್ ಶೆಟ್ಟಿ ಪಾಂಗಾಳ, ರೆಹಮುತುಲ್ಲಾ, ದಿನಕರ್ ಹೆರೂರು, ಹರೀಶ್ ಶೆಟ್ಟಿ ಕೀಳಂಜೆ, ಡಾ. ಸುನೀತಾ ಶೆಟ್ಟಿ, ರಘುರಾಮ್ ಶೆಟ್ಟಿ ನಿತ್ಯಾನಂದ ಕೆಮ್ಮಣ್ಣು, ಸೂರ್ಯ ಸಾಲಿಯಾನ್, ರಾಘವೇಂದ್ರ, ಕುಮಾರ್ ಹಾರಾಡಿ ಹಾಗೂ ಇತರರು ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಸದಸ್ಯ ದಿನಕರ ಹೇರೂರು ವಂದಿಸಿದರು.


Spread the love