ಡಿ ಗ್ರೂಪ್ ನೌಕರರ ಸಂಘದಿಂದ ಸತ್ಯನಾರಾಯಣ ಪೂಜೆ

Spread the love

ಡಿ ಗ್ರೂಪ್ ನೌಕರರ ಸಂಘದಿಂದ ಸತ್ಯನಾರಾಯಣ ಪೂಜೆ

ಮ0ಗಳೂರು :ದ.ಕ. ಜಿಲ್ಲಾ ರಾಜ್ಯ ಸರ್ಕಾರಿ ಡಿ ಗ್ರೂಪ್ ನೌಕರರ ಸಂಘದ ವತಿಯಿಂದ ಸಂಘಧ ಸಭಾಭವನದಲ್ಲಿ ವಜ್ರಮಹೋತ್ಸವ ಅಂಗವಾಗಿ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು.

ಎಡಪದವು ಮಂಜುನಾಥ ತಂತ್ರಿ ಇವರ ನೇತ್ರತ್ವದಲ್ಲಿ ಪೂಜೆ ಜರುಗಿತು. ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಜೀವಿ ಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಮುಖ್ಯ ಸಚೇತಕರಾದ ಐವನ್ ಡಿ’ಸೋಜ, ಶಾಸಕ ಜೆ.ಆರ್. ಲೋಬೊ. ಮೇಯರ್ ಕವಿತಾ ಸನಿಲ್, ಅಪರ ಜಿಲ್ಲಾಧಿಕಾರಿ ಕುಮಾರ ಮತ್ತು ಜಿ.ಪಂ.ಅಭಿಯಂತರ ರವೀಂದ್ರ ಕಿಣಿ ಮತ್ತಿತರರು ಭಾಗವಹಿಸಿದ್ದರು.

ವಿವಿಧ ಇಲಾಖಾ ಸರಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಭಕ್ತಾಧಿಗಳು ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಸತ್ಯ ನಾರಾಯಣ ಪೂಜಾ ಪ್ರಸಾದ ಮತ್ತು ಅನ್ನ ಪ್ರಸಾದವನ್ನು ಸ್ವೀಕರಿಸಿದರು. ಸಂಘದ ಅದ್ಯಕ್ಷರಾದ ಪ್ರಾಂಕಿ ಪ್ರಾನ್ಸಿಸ್ ಕುಟಿನ್ಹ ಸ್ವಾಗತಿಸಿದರು. ಪೂಜಾ ಸಂಚಾಲಕರಾದ ಪದ್ಮನಾಭ ಬಂಗೇರ, ಸಹ ಸಂಚಾಲಕರಾದ ಚಂದ್ರಹಾಸ ಶೆಟ್ಟಿ, ಮತ್ತು ಪಿ.ಕೆ ಕೃಷ್ಣ ಇದ್ದರು.
ಸಂಘದ ಸಂಘಟನಾ ಕಾರ್ಯದರ್ಶಿ ಸಿರಿಲ್ ರಾಬರ್ಟ್ ಡಿ’ಸೋಜ ವಂದಿಸಿದರು.


Spread the love