Home Mangalorean News Kannada News ಡಿ.17ರಂದು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯಲ್ಲಿ ಪ್ರತಿಭಟನೆ

ಡಿ.17ರಂದು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯಲ್ಲಿ ಪ್ರತಿಭಟನೆ

Spread the love

ಡಿ.17ರಂದು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ : ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧ ವಾಗಿ ಹಾಗೂ ಜಾತ್ಯತೀತ ಹಂದರವನ್ನು ನಾಶ ಮಾಡಿ ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಹಾಗೂ ಸಹಭಾಗಿ ಸಂಘ ಟನೆಗಳ ವತಿಯಿಂದ ಡಿ.17ರಂದು ಸಂಜೆ 4ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನಾ ಸಭೆಯಲ್ಲಿ ಹೋರಾಟಗಾರ ಶಿವಸುಂದರ್, ಚಿಂತಕರು ಹಾಗೂ ಗಣ್ಯರು ಭಾಗವಹಿಸಲಿರುವರು. ದೇಶದ ಭದ್ರತೆಯ ದೃಷ್ಟಿಯಿಂದಲೂ ಹಾನಿಕಾರಕವಾದ ಈ ಮಸೂದೆ ವಿರುದ್ಧದ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಬೇಕು ಎಂದು ಪ್ರತಿಭಟನಾ ಸಂಚಾಲಕ ಹುಸೇನ್ ಕೋಡಿಬೆಂಗ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version