ಡಿ.26 ರಂದು ಕಾಪುವಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಾವೇಶ

Spread the love

ಡಿ.26 ರಂದು ಕಾಪುವಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಾವೇಶ

ಉಡುಪಿ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‍ನ ಸಮಾವೇಶವು ಡಿಸೆಂಬರ್ 26 ರಂದು ಕಾಪು ಜನಾರ್ದನ ದೇವಸ್ಥಾನದ ಎದುರುಗಡೆಯ ಮೈದಾನದಲ್ಲಿ ಮದ್ಯಾಹ್ನ 3 ಗಂಟೆಗೆ ಜರಗಲಿದೆ.

ಸಭಾ ಕಾರ್ಯಕ್ರಮದ ಮೊದಲು ಕಾಪು ರಾಜೀವ ಭವನದಿಂದ ಕಾರ್ಯಕರ್ತರ ಮೆರವಣಿಗೆಯು ಸಮಾವೇಶ ನಡೆಯುವ ಸ್ಥಳಕ್ಕೆ ತೆರಳಲಿದೆ.

ಸಮಾವೇಶದ ಉದ್ಘಾಟನೆಯನ್ನು ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್‍ರವರು ನೆರವೇರಿಸಲಿದ್ದು, ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಸಚಿವರೂ ಶಾಸಕರೂ ಆದ ವಿನಯಕುಮಾರ್ ಸೊರಕೆ, ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷರೂ ಶಾಸಕರೂ ಆದ  ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ  ಜನಾರ್ದನ ತೋನ್ಸೆ, ವಿಧಾನ ಪರಿಷತ್ ಸದಸ್ಯರಾದ  ಕೆ. ಪ್ರತಾಪಚಂದ್ರ ಶೆಟ್ಟಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಸವನ ಗೌಡ ಬಾದರ್ಲಿ, ಮಾಜಿ ಶಾಸಕರಾದ ಗೋಪಾಲ ಭಂಡಾರಿಯವರು ಭಾಗವಹಿಸಲಿರುವರು. ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ಅಮೀನ್ ಹಾಗೂ ಯುವ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿಗಳಾದ  ಹಬೀಬ್ ಅಲಿ ಮತ್ತು  ಅಮೃತ್ ಶೆಣೈಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love