Home Mangalorean News Kannada News ತಲವಾರು ಹಿಡಿದು ದಾಳಿ ಯತ್ನ – ವಾಮಂಜೂರು ನಿವಾಸಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ತಲವಾರು ಹಿಡಿದು ದಾಳಿ ಯತ್ನ – ವಾಮಂಜೂರು ನಿವಾಸಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

Spread the love

ತಲವಾರು ಹಿಡಿದು ದಾಳಿ ಯತ್ನ – ವಾಮಂಜೂರು ನಿವಾಸಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ಮಂಗಳೂರು: ವಾಮಂಜೂರು ನಿವಾಸಿ ನವೀನ್ ಎಂಬಾತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ನವೀನ್‌ಗೆ ಕುಟುಂಬ ಸಮಸ್ಯೆಗಳಿದ್ದು, ಪತ್ನಿಯಿಂದ ವಿಚ್ಛೇದನವಾಗಿದ್ದು, ಕಳೆದ ಕೆಲವು ತಿಂಗಳಿನಿಂದ ಆಕೆ ಜೋಕಟ್ಟೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಳೆ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ನವೀನ್ ಕತ್ತಿಯನ್ನು ಹಿಡಿದು ಕಲವಾರ ನಿವಾಸಿ ದೇವಿ ಪ್ರಸಾದ್ ಹಾಗೂ ಅವರ ಪೋಷಕರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಈ ವೇಳೆ ದೇವಿ ಪ್ರಸಾದ್ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಪರಾರಿಯಾಗಲು ಯತ್ನಿಸಿದ ನವೀನ್ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದಾನೆ. ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿ ಪ್ರಸಾದ್ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಹಾಗೂ ಆಯುಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಸ್ತುತ ಆರೋಪಿಯನ್ನು ಠಾಣೆಯಲ್ಲಿ ಇರಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.


Spread the love

Exit mobile version