ತಳಮಟ್ಟದಿಂದ ಪಕ್ಷ ಕಟ್ಟಲು ಮುಂದಾಗಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

Spread the love

ತಳಮಟ್ಟದಿಂದ ಪಕ್ಷ ಕಟ್ಟಲು ಮುಂದಾಗಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

ಮಂಗಳೂರು: ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ದ.ಕ. ಜಿಲ್ಲೆಯ ಎಲ್ಲಾ ಬ್ಲಾಕ್ ಗಳಲ್ಲಿ ತಳಮಟ್ಟದಿಂದ ಪಕ್ಷ ಕಟ್ಟಲು ಎಲ್ಲಾ ನಾಯಕರು ಮುಂದಾಗಬೇಕು. ಪ್ರತೀ ನಾಯಕರು ಎಲ್ಲಾ ಬ್ಲಾಕ್ ಗಳ ಸಭೆಗಳಲ್ಲಿ ಭಾಗವಹಿಸಿ ಸಲಹೆ, ಸೂಚನೆ ನೀಡಬೇಕು. ಬಿಜೆಪಿ ವೈಫಲ್ಯ, ಪಕ್ಷದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಆಗಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕಾರದ ನಾರಾಯಣ ಸ್ವಾಮಿ, ಮಾಜಿ ಸಚಿವರಾದ ರಮಾನಾಥ ರೈ, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಗಂಗಾಧರ ಗೌಡ, ಜೆ.ಆರ್.ಲೋಬೋ, ಐವನ್ ಡಿಸೋಜಾ, ಇಬ್ರಾಹೀಂ ಕೋಡಿಜಾಲ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು, ಎಐಸಿಸಿ-ಕೆಪಿಸಿಸಿ ಸದಸ್ಯರುಗಳು ಮತ್ತು ಸಂಯೋಜಕರು, ಜಿಲ್ಲಾ-ತಾಲ್ಲೂಕು, ನಗರ ಪಂಚಾಯತ್, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಸದಸ್ಯರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರುಗಳು ಉಪಸ್ಥಿತರಿದ್ದರು.


Spread the love