ತಾಯಿ, ಮಕ್ಕಳ ಹತ್ಯೆ ಆರೋಪಿಯನ್ನು ಕೂಡಲೇ ಬಂಧಿಸಿ – ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ರಾವ್

Spread the love

ತಾಯಿ, ಮಕ್ಕಳ ಹತ್ಯೆ ಆರೋಪಿಯನ್ನು ಕೂಡಲೇ ಬಂಧಿಸಿ – ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ರಾವ್

ಉಡುಪಿ: ಉಡುಪಿ ಸಮೀಪದ ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವ ಆರೋಪಿಯನ್ನು ಕೂಡಲೇ ಬಂಧಿಸುವಂತೆಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ್ ರಾವ್ ಆಗ್ರಹಿಸಿದ್ದಾರೆ.

ಹಾಡಹಗಲೇ ಅಪರಿಚಿತ ವ್ಯಕ್ತಿಯೋರ್ವ ಮನೆಗೆ ನುಗ್ಗಿ ತಾಯಿ ಮತ್ತು ಮಕ್ಕಳನ್ನು ಬೀಭತ್ಸವಾಗಿ ಕೊಚ್ಚಿ ಕೊಲೆ ಮಾಡಿ ತೆರಳಿರುವುದು ಉಡುಪಿ ಜಿಲ್ಲೆಯನ್ನು ಬೆಚ್ಚಿ ಬೀಳಿಸುವಂತಾಗಿದೆ. ಇಡೀ ಕುಟುಂಬವನ್ನು ಭೀಕರವಾಗಿ ಕೊಲೆ ಮಾಡಿ ಸರ್ವ ನಾಶ ಮಾಡಿರುವುದು ಸ್ಥಳೀಯ ನಿವಾಸಿಗಳಲ್ಲಿ ಅತಂಕ ಮತ್ತು ಅಭದ್ರತೆ ಮೂಡಲ ಕಾರಣವಾಗಿದೆ. ಜಿಲ್ಲೆಯಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ವರ ಹತ್ಯೆ ಅತ್ಯಂತ ಅಮಾನುಷ ಕೃತ್ಯವಾಗಿದ್ದು ತೀವ್ರ ಖಂಡನೀಯವಾಗಿದೆ.

ನೇಜಾರಿನಲ್ಲಿ ನಡೆದಿರುವ ಘಟನೆಯಿಂದ ಮಹಿಳೆಯರು ಮತ್ತು ಮಕ್ಕಳು ಏಕಾಂಗಿಯಾಗಿ ಮನೆಯಲ್ಲಿ ವಾಸಿಸಲು ಭಯಪಡುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ದಕ್ಷ ಪೊಲೀಸ್ ವರಿಷ್ಠಾಧಿಕಾರಿಯಿಂದ ಕೊಲೆಯ ಸಂಚನ್ನು ಭೇಧಿಸಿ ಆರೋಪಿಯನ್ನು ಕೂಡಲೇ ಬಂಧಿಸಭೇಕು. ನಗರದೆಲ್ಲೆಡೆ ಸಿಸಿ ಟಿವಿ ಕ್ಯಾಮಾರಾಗಳಿದ್ದರೂ ಕೂಡ ಯಾವುದೂ ಕಾರ್ಯಾಚರಿಸುತ್ತಿಲ್ಲ. ಇದರ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಗಮನಹರಿಸಿ ನಾಗರಿಕರ ರಕ್ಷಣೆಯನ್ನು ಮಾಡಬೇಕಾಗಿದೆ.

ಪೊಲೀಸ್ ಇಲಾಖೆ ತಾಯಿ ಮತ್ತು ಮಕ್ಕಳ ಕೊಲೆಗಾರನನ್ನು ಹಿಡಿದು ಕೊಲೆಗೆ ನೈಜ ಕಾರಣವನ್ನು ಕಂಡು ಹುಡುಕುವುದರ ಮೂಲಕ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುವಂತೆ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.


Spread the love