ತೆಂಕನಿಡಿಯೂರು : ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ ಪ್ರಖ್ಯಾತ್ ಶೆಟ್ಟಿ ಮತ್ತವರ ತಂಡ

Spread the love

ತೆಂಕನಿಡಿಯೂರು : ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ ಪ್ರಖ್ಯಾತ್ ಶೆಟ್ಟಿ ಮತ್ತವರ ತಂಡ

ಉಡುಪಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವಾರು ಪ್ರದೇಶಗಳು ಜಲಾವೃತಗೊಂಡ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಹಾಗೂ ತಾಲೂಕು ಪಂಚಾಯತ್ ಸದಸ್ಯ ಧನಂಜಯ ಕುಂದರ್ ನೇತೃತ್ವದಲ್ಲಿ ಬೆಳಗ್ಗಿನ ಜಾವದಿಂದಲೇ ಕಾರ್ಯಕರ್ತರು ಸ್ಥಳಗಳಿಗೆ ಭೇಟಿ ನೀಡಿ ತೊಂದರೆಗೆ ಒಳಗಾದ ಜನರಿಗೆ ರಕ್ಷಣಾ ಕಾರ್ಯ ನೆರವೇರಿಸಿದರು.

ಅಲ್ಲದೆ ರಕ್ಷಣೆ ಮಾಡಿದ ಜನರನ್ನು ಸೂಕ್ತ ಸ್ಥಳದಲ್ಲಿ ತಾತ್ಕಲಿಕ ವ್ಯವಸ್ಥೆ ಮಾಡುವುದರೊಂದಿಗೆ ಅವರಿಗೆ ತೆಂಕನಿಡಿಯೂರು ಪ್ರೌಢ ಶಾಲೆಯಲ್ಲಿ ಗಂಜಿ ಕೇಂದ್ರದ ವ್ಯವಸ್ಥೆಯನ್ನು ಮಾಡಿ ಸಂಕಷ್ಟದಲ್ಲಿರುವವರಿಗೆ ಧೈರ್ಯ ತುಂಬುವ ಕೆಲಸವನ್ನು ಕೂಡ ಮಾಡಿದರು.

ಈ ವೇಳೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಪಂಚಾಯತ್ ಸದಸ್ಯರಾದ ವೆಂಕಟೇಶ್ ಕುಲಾಲ್, ಆಗ್ನೆಲ್ ಫೆರ್ನಾಂಡಿಸ್, ಗ್ರಾಮ ಕರಣಿಕ ಜಗದೀಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಪಾಲ್, ಸ್ಥಳೀಯ ಯುವಕರು ಹಾಗೂ ಸಾರ್ವಜನಿಕರು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದರು.


Spread the love