ತೆಕ್ಕಟ್ಟೆ: ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Spread the love

ತೆಕ್ಕಟ್ಟೆ: ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕುಂದಾಪುರ: ತೆಕ್ಕಟ್ಟೆ ಭಾಗದ ಜೆಡಿಎಸ್ ಮುಖಂಡ ಪ್ರಕಾಶ್ ಶೆಟ್ಟಿ ಮತ್ತು ಸಂಗಡಿಗರು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಜಯಪ್ರಕಾಶ್ ಹೆಗ್ಡೆ ಪ್ರಕಾಶ್ ಶೆಟ್ಟಿ ಮತ್ತು ಸಂಗಡಿಗರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶೋಭನಾ ಶೆಟ್ಟಿ, ಸದಸ್ಯರಾದ ವಿಜಯ ಭಂಡಾರಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸಲಾಮ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love