ದಕ ಜಿಲ್ಲೆಯಲ್ಲಿ ಕೊರೋನಾ ಗೆ ಒಂದೇ ದಿನ ಮೂರು ಮಂದಿ ಬಲಿ- ಜೊಕಟ್ಟೆ ಮಹಿಳೆ ಸಾವು

Spread the love

ದಕ ಜಿಲ್ಲೆಯಲ್ಲಿ ಕೊರೋನಾ ಗೆ ಒಂದೇ ದಿನ ಮೂರು ಮಂದಿ ಬಲಿ

ಮಂಗಳೂರು: ಮಹಾಮಾರಿ ಕೊರೋನಾ ತನ್ನ ಭೀಕರತೆಯನ್ನು ತೋರುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಮೂರು ಮಂದಿಯನ್ನು ಬಲಿಪಡೆಯುವುದರೊಂದಿಗೆ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 13 ಕ್ಕೇ ಏರಿದೆ.

ಭಾನುವಾರ ಬೆಳಗಿನ ಜಾವ ಸುರತ್ಕಲ್ ನ 31 ರ ಹರೆಯದ ಯುವಕ ಹಾಗೂ ಬಂಟ್ವಾಳದ ವೃದ್ಧೆಯೋರ್ವರು ಕರೋನಾ ಸೋಂಕಿಗೆ ಬಲಿಯಾಗಿದ್ದು ಈಗ ಮತ್ತೆ ಸುರತ್ಕಲ್ ಜೋಕಟ್ಟೆ ನಿವಾಸಿ 51 ವರ್ಷದ ಮಹಿಳೆಯೋರ್ವರು ಸಾವನಪ್ಪಿದ್ದಾರೆ ಎನ್ನಲಾಗಿದೆ.

ಸುರತ್ಕಲ್ ಸಮೀಪದ ಜೋಕಟ್ಟೆ ನಿವಾಸಿ 51ರ ಹರೆಯದ ಮಹಿಳೆ ಅನಾರೋಗ್ಯ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು ಗಂಟಲ ದ್ರವ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಜೋಕಟ್ಟೆ ಸಮೀಪದ ನಿವಾಸಿ ಮಹಿಳೆ ಟಿಬಿ ಖಾಯಿಲೆಯಿಂದ ಬಳಲುತ್ತಿದ್ದು ಅದಕ್ಕಾಗಿ ಸುರತ್ಕಲ್ ಕಾನ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿ ಆರೋಗ್ಯ ತೀರಾ ಹದಗೆಟ್ಟ ಕಾರಣ ಜೂ. 26ರ ಸಂಜೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಪರೀಕ್ಷೆ ವೇಳೆ ಕೊರೋನಾ ಸೋಂಕು ಪತ್ತೆಯಾಗಿದೆ.


Spread the love