ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

Spread the love

ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ನೂತನ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಅವರಿಗೆ ಪ್ರಭಾರ ಹಸ್ತಾಂತರಿಸಿದರು.

ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.


Spread the love