ದುಷ್ಮರ್ಮಿಗಳಿಂದ ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಹಲ್ಲೆ- ಆಸ್ಪತ್ರೆಯಲ್ಲಿ ಮೃತ್ಯು

Spread the love

ದುಷ್ಮರ್ಮಿಗಳಿಂದ ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಹಲ್ಲೆ- ಆಸ್ಪತ್ರೆಯಲ್ಲಿ ಮೃತ್ಯು

ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ವ್ಯಕ್ತಿಯೋರ್ವರನ್ನು ಹಲ್ಲೆ ನಡೆಸಿದ್ದು ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ

ಮೃತ ವ್ಯಕ್ತಿಯನ್ನು ಅಡ್ಯಾರ್ ನಿವಾಸಿ ಯಾಕೂಬ್ ಎಂದು ಗುರುತಿಸಲಾಗಿದೆ. ಯಾಕೂಬ್ ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು.

ಶುಕ್ರವಾರ ತಡರಾತ್ರಿ ನಾಲ್ವರು ದುಷ್ಕರ್ಮಿಗಳು ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಯಾಕೂಬ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಆರೋಪಿಗಳ ಶೋಧ ಕಾರ್ಯ ನಡೆದಿದೆ.

ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.


Spread the love