ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ‘ಗಾಂಧಿ’ ಕಾರ್ಯಕ್ರಮಕ್ಕೆ ಚಾಲನೆ

Spread the love

ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ‘ಗಾಂಧಿ’ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150ನೆ ಜನ್ಮ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಬಿಜೆಪಿಯು ಹಮ್ಮಿಕೊಂಡ ‘ಗಾಂಧಿ’ ಕುರಿತ ವಿಶಿಷ್ಟ ಕಾರ್ಯಕ್ರಮಕ್ಕೆ ರವಿವಾರ ನಗರದಲ್ಲಿ ಚಾಲನೆ ನೀಡಲಾಯಿತು.

ನಗರದ ಪುರಭವನದ ಬಳಿಯ ಗಾಂಧಿ ಪ್ರತಿಮೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಚಾಲನೆ ನೀಡಿದರು.

ಈ ಕಾರ್ಯಕ್ರಮವು ನ.21ರವರೆಗೆ ಜಿಲ್ಲಾದ್ಯಂತ ನಡೆಯಲಿದೆ. ಪ್ರತೀ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲಾ 150 ಕಿ.ಮೀ. ಪಾದಯಾತ್ರೆಯಂತೆ 8 ಕ್ಷೇತ್ರದಲ್ಲಿ 1200 ಕಿ.ಮೀ. ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮತ್ತಿತರರು ಪಾಲ್ಗೊಂಡಿದ್ದರು.


Spread the love