ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವತ್ರಿಕ ಚುನಾವಣೆ: ಮದ್ಯ ಮಾರಾಟ ನಿಷೇಧ

Spread the love

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವತ್ರಿಕ ಚುನಾವಣೆ: ಮದ್ಯ ಮಾರಾಟ ನಿಷೇಧ

ಮಂಗಳೂರು : ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವತ್ರಿಕ ಚುನಾವಣೆ-2018 ನಡೆಸುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತದಿಂದ ಕೂಡಿದ ಶಾಂತಿಯುತ ವಾತಾವರಣದಲ್ಲಿ ಮತದಾನವು ನಡೆಯುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ಅವರು ಪುತ್ತೂರು ನಗರಸಭೆ, ಉಳ್ಳಾಲ ನಗರಸಭೆ ಮತ್ತು ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಆಗಸ್ಟ್ 29 ಸಾಯಂಕಾಲ 6 ಗಂಟೆಯಿಂದ ಆಗಸ್ಟ್ 31 ಸಂಜೆ 6 ಗಂಟೆವರೆಗೆ ಮದ್ಯ ಮುಕ್ತ ದಿನಗಳೆಂದು ಘೋಷಿಸಲಾಗಿದೆ.

ಮತ ಎಣಿಕೆಯ ಸಲುವಾಗಿ ಸೆಪ್ಟಂಬರ್ 3 ರಂದು ಬೆಳಿಗ್ಗೆ 6 ಗಂಟೆಯಿಂದ ಸಾಯಂಕಾಲ 8 ಗಂಟೆವರೆಗೆ ಮತ ಎಣಿಕೆ ನಡೆಯುವ ಪ್ರದೇಶವಾದ ಭಾರತ್ ಪ್ರೌಢಶಾಲೆ ಉಳ್ಳಾಲ, ಪುತ್ತೂರು ಮತ್ತು ಬಂಟ್ವಾಳ ತಾಲೂಕು ಕಚೇರಿಗಳ 3 ಕಿ.ಮೀ. ವ್ಯಾಪ್ತಿ ಪ್ರದೇಶಗಳನ್ನು ಮದ್ಯ ಮುಕ್ತ ದಿನಗಳೆಂದು ಘೋಷಿಸಲಾಗಿದೆ.

ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

ಈ ದಿನಗಳಲ್ಲಿ ಪುತ್ತೂರು ನಗರಸಭೆ, ಉಳ್ಳಾಲ ನಗರಸಭೆ ಮತ್ತು ಬಂಟ್ವಾಳ ಪುರಸಭೆಯ ವ್ಯಾಪ್ತಿಯಲ್ಲಿ ಸೂಚಿತ ಅವಧಿಯಲ್ಲಿ ಯಾವುದೇ ಹೊಟೇಲುಗಳಲ್ಲಾಗಲೀ ನಾನ್ ಪ್ರೊಪ್ರೈಟರ್‍ಗಳಲ್ಲಿ, ಸ್ಟಾರ್ ಹೊಟೇಲ್‍ಗಳಲ್ಲಾಗಲೀ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ಕೂಡ ನಿಷೇಧಿಸಿ ಆದೇಶಿಸಲಾಗಿದೆ.


Spread the love