ನಾಯಕರ ಹೆಸರಿನ ಬದಲು ಅಭಿವೃದ್ಧಿ ಆಧಾರದಲ್ಲಿ ಮತ ಯಾಚಿಸುತ್ತೇವೆ – ಜೆ.ಪಿ. ಹೆಗ್ಡೆ

Spread the love

ನಾಯಕರ ಹೆಸರಿನ ಬದಲು ಅಭಿವೃದ್ಧಿ ಆಧಾರದಲ್ಲಿ ಮತ ಯಾಚಿಸುತ್ತೇವೆ – ಜೆ.ಪಿ. ಹೆಗ್ಡೆ

ಚಿಕ್ಕಮಗಳೂರು: ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತಯಾಚಿಸಿ ಭ್ರಷ್ಠಾಚಾರರಹಿತ ಆಡಳಿತ ನಡೆಸುತ್ತೇವೆ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆ ಬಾಂಡ್ ಹಗರಣದಿಂದ ಇವರ ಭ್ರಷ್ಠಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಬಯಲಿಗೆಳೆದಿರುವುದು ದೇಶಕ್ಕೆ ತಿಳಿದಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ತಾಲೂಕಿನ ಬಣಕಲ್, ಕಸಬಾ, ಗೋಣಿಬೀಡು, ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ತಾವು ಸಂಸದರಾಗಿದ್ದಾಗ ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅನುಮೋದನೆಯಾಗಿತ್ತು ಆದರೆ ನಂತರ 10 ವರ್ಷ ಕಳೆದರೂ ರಸ್ತೆ ಅಗಲೀಕರಣ ಮಾಡಲು ಬಿಜೆಪಿಯವರಿಗೆ ಸಾಧ್ಯವಾಗಲಿಲ್ಲ. ಅಲ್ಲದೇ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿ ಕೂಡ ಆಗಿದ್ದರು ಇಲ್ಲಿನ ಕಾಫಿ ಬೆಳೆಗಾರರ ಸಮಸ್ಯೆ, ಅಡಕೆ ರೋಗ ನಿವಾರಣೆ ಸೇರಿದಂತೆ ರೈತರ ಹಾಗೂ ಜನರ ಸಮಸ್ಯೆ ನಿವಾರಿಸಲಿಲ್ಲ. ಪೆಟ್ರೋಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ನೆಮ್ಮದಿಯಿಂದ ಬದುಕದಂತೆ ಮಾಡಿದ್ದಾರೆ. ಯಾವುದೇ ಅಭಿವೃದ್ಧಿ ಹಾಗೂ ಜನಪರ ಯೋಜನೆ ರೂಪಿಸದೇ ಕೇವಲ ಮೋದಿ ಹೆಸರೇಳಿಕೊಂಡು ಪುನಃ ಮತ ಕೇಳಿದರೆ ಜನ ಬೆಂಬಲಿಸುತ್ತಾರೆಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆಂದು ದೂರಿದರು.

ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಕಪ್ಪು ಹಣ ತಂದು ಎಲ್ಲರ ಅಕೌಂಟ್ ಗೆ 15 ಲಕ್ಷ ಹಾಕುತ್ತೇವೆಂದು ಇದುವರೆಗೂ ಹಾಕಿಲ್ಲ. ಆ ಕಪ್ಪು ಹಣ ಕಪ್ಪಾಗಿಯೇ ಉಳಿದಿದೆ. ಭ್ರಷ್ಟಾಚಾರ ರಹಿತ ಆಡಳಿತದ ಬಗ್ಗೆ ಮಾತನಾಡುವವರು ಚುನಾವಣೆ ಬಾಂಡ್ ಹಣಗರಣದಿಂದ ಇವರ ಭ್ರಷ್ಠಾಚಾರದ ಬಗ್ಗೆ ಸುಪ್ರಿಂಕೋರ್ಟ್ ಬಯಲಿಗೆಳೆದಿದೆ. ಉಜ್ವಲ ಯೋಜನೆಯಲ್ಲಿ ಉಚಿತ ಗ್ಯಾಸ್ ಯಾರಿಗೂ ಬರುತ್ತಿಲ್ಲ. ರಾಜ್ಯ ಸರಕಾರ 5 ಗ್ಯಾರಂಟಿ ನೀಡಿದಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕೂಡ 5 ಗ್ಯಾರಂಟಿ ಘೋಷಿಸಿದೆ. ಇದರಿಂದ ಜನರ ಸಂಕಷ್ಠ ನಿವಾರಣೆಯಾಗುತ್ತದೆ ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಶಾಸಕಿ ನಯನಾ ಮೋಟಮ್ಮ ಮಾತನಾಡಿ ರಾಜ್ಯ ಸರಕಾರ ನೀಡಿರುವ 5 ಗ್ಯಾರಂಟಿಯಿಂದ ಜನರಿಗೆ ಅನುಕೂಲವಾಗಿದೆ. ಅಲ್ಲದೇ ನಮ್ಮ ಅಭ್ಯರರ್ಥಿ ಜಯಪ್ರಕಾಶ್ ಹೆಗ್ಡೆ ಹಿಂದೆ 20 ತಿಂಗಳು ಸಂಸರಾಗಿದ್ದಾಗೆ ಅನೇಕ ಜನಪರ ಕೆಲಸ ಮಾಡಿದ್ದಾರೆ ಇದರಿಂದ ನಾವು ಜನರ ಬಳಿ ತೆರಳಿ ಮತ ಕೇಳುವ ಧೈರ್ಯ ನಮಗಿದೆ ಆದರೆ ಕಳೆದ 10 ವರ್ಷದಲ್ಲಿ ಕೇಂದ್ರದ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ಅವರ ಅಭಿವೃದ್ಧಿ ಕಾರ್ಯ ಶೂನ್ಯವೆಂದು ಅವರದೇ ಪಕ್ಷದವರು ಗೋಬ್ಯಾಕ್ ಶೋಭಾ ಎಂದು ಇಲ್ಲಿಂದ ಓಡಿಸಿದ್ದಾರೆ. ಇದರಿಂದ ಬಿಜೆಪಿಯರಿಗೆ ಜನರ ಬಳಿ ಹೋಗಿ ಮತ ಕೇಳಲು ಅಂಜಿಕೆ ಉಂಟಾಗಿದೆ. ಈಗಾಗಲೇ ಜನರು ಬದಲಾವಣೆ ಬಯಸಿದ್ದಾರೆ. ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸ ಆಗಬೇಕಾಗಿದೆ ಅದಕ್ಕಾಗಿ ನಮ್ಮ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಮತ ಹಾಕಿ ಗೆಲ್ಲಿಸುವ ಮೂಲಕ ಸಂಸತ್ ಗೆ ಕಳುಹಿಸಿಕೊಡಬೇಕೆಂದು ಮನವಿ ಮಾಡಿದರು.


Spread the love

Leave a Reply