Home Mangalorean News Kannada News ನಿಂತ ಬಸ್ಸಿಗೆ ಮರಳು ಸಾಗಾಟದ ಲಾರಿ ಡಿಕ್ಕಿ

ನಿಂತ ಬಸ್ಸಿಗೆ ಮರಳು ಸಾಗಾಟದ ಲಾರಿ ಡಿಕ್ಕಿ

Spread the love

ನಿಂತ ಬಸ್ಸಿಗೆ ಮರಳು ಸಾಗಾಟದ ಲಾರಿ ಡಿಕ್ಕಿ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮರಳು ಸಾಗಾಟದ ಲಾರಿಯೊಂದು ನಿಂತಿದ್ದ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಬಿಸಿರೋಡ್ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಭಾನುವಾರ ಬೆಳಿಗ್ಗೆ ಮರಳು ಸಾಗಿಸುತ್ತಿದ್ದ ಲಾರಿಯ ಚಾಲಕ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡು ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದ್ದ ಎನ್ನಲಾಗಿದೆ. ಅದೃಷ್ಟವಶಾತ್ ಬೆಳಗ್ಗಿನ ಸಮಯ ಮತ್ತು ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದ ಪರಿಣಾಮ ಬಹು ದೊಡ್ಡ ದುರಂತ ತಪ್ಪಿದಂತಾಗಿದೆ.

ಟ್ರಾಫಿಕ್ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.


Spread the love

Exit mobile version