ನಿಲ್ಲಿಸಿದ್ದ ಕಾರಿನ ಗಾಜು ಪುಡಿಗೈದು 15 ಲಕ್ಷ ರೂ. ದರೋಡೆ

Spread the love

ನಿಲ್ಲಿಸಿದ್ದ ಕಾರಿನ ಗಾಜು ಪುಡಿಗೈದು 15 ಲಕ್ಷ ರೂ. ದರೋಡೆ

ಮಂಗಳೂರು : ನಿಲ್ಲಿಸಿದ್ದ ಕಾರಿನ ಗಾಜು ಪುಡಿಗೈದು ಕಾರಿನೊಳಗಿದ್ದ 15 ಲಕ್ಷ ರೂ. ದರೋಡೆಗೈದ ಘಟನೆ ನಗರದ ಚಿಲಂಬಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಹಣದ ವಾರಸುದಾರರು ಕಾರನ್ನು ಚಿಲಿಂಬಿಯಲ್ಲಿ ಪಾರ್ಕ್ ಮಾಡಿ ಡೋರ್ ಲಾಕ್ ಮಾಡಿ ಸೌತ್ ಇಂಡಿಯಾ ಬ್ಯಾಂಕಿಗೆ ತೆರಳಿದ್ದರೆನ್ನಲಾಗಿದೆ. ಈ ವೇಳೆ ಕಾರಿನ ಹಿಂಬದಿ ಸೀಟಿನ ಬಾಗಿಲಿನ ಗಾಜು ಪುಡಿಗೈದು ಒಳಗಿದ್ದ 15 ಲಕ್ಷ ರೂ. ನಗದು ಎಗರಿಸಿ ಪರಾರಿಯಾಗಿದ್ದರೆನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.


Spread the love