ನಿಷ್ಟಾವಂತ ಪೊಲೀಸ್ ಅಧಿಕಾರಿ ಅನಂತಪದ್ಮನಾಭ ಅಮಾನತು ರದ್ದುಗೊಳಿಸಿ – ಸುನೀಲ್ ಕೆ ಆರ್

Spread the love

ನಿಷ್ಟಾವಂತ ಪೊಲೀಸ್ ಅಧಿಕಾರಿ ಅನಂತಪದ್ಮನಾಭ ಅಮಾನತು ರದ್ದುಗೊಳಿಸಿ – ಸುನೀಲ್ ಕೆ ಆರ್

ಉಡುಪಿ: ನಿಷ್ಟಾವಂತ ಪೊಲೀಸ್ ಅಧಿಕಾರಿಯಾಗಿದ್ದು ಉಡುಪಿ ನಗರ ಠಾಣೆಯ ಠಾಣಾಧಿಕಾರಿ ಅನಂತ ಪದ್ಮನಾಭ ಅವರನ್ನು ಯಾವುದೇ ಕಾರಣವಿಲ್ಲದೆ ಅಮಾನತು ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ನಿರ್ಧಾರ ಖಂಡನೀಯ ಕೂಡಲೇ ಅವರ ಅಮಾನತು ಆದೇಶವನ್ನು ರದ್ದುಗೊಳಿಸಬೇಕು ಎಂದು ಬಜರಂಗದಳ ರಾಜ್ಯ ಸಂಚಾಲಕ ಸುನೀಲ್ ಕೆ ಆರ್ ಆಗ್ರಹಿಸಿದ್ದಾರೆ.

ಉಡುಪಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಟಾವಂತ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನಗರ ಠಾಣಾಧಿಕಾರಿ ಅನಂತ ಪದ್ಮನಾಭ ಅವರನ್ನು ಅಮಾನತು ಮಾಡಿರುವುದು ಸರಿಯಲ್ಲ. ಅವರು ಎಲ್ಲಾ ಸಮುದಾಯಗಳೊಂದಿಗೆ ಶಾಂತಿಯುತವಾಗಿ ಸೌಹಾರ್ದಯುತವಾಗಿ ವರ್ತಿಸುವ ಅವರನ್ನು ಯಾವುದೇ ಕಾರಣವಿಲ್ಲದೆ ಅಮಾನತು ಮಾಡಿರುವುದು ಸರಿಯಲ್ಲ. ಕ್ರಿಮಿನಲ್ ಆರೋಪ ಹೊಂದಿರುವ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದಾಗ ಅವರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ್ದು ಪ್ರಕರಣ ಶಾಂತಿಯುತವಾಗಿ ಮುಗಿಸಿದ ಅಧಿಕಾರಿಗೆ ಇಂತಹ ಅಮಾನತು ಶಿಕ್ಷೆ ನೀಡಿರುವುದು ಸರಿಯಲ್ಲ. ಆದ್ದರಿಂದ ಅವರಿಗೆ ಕೂಡಲೇ ಅವರ ಅಮಾನತು ಆದೇಶವನ್ನು ವಾಪಾಸು ಪಡೆಯಬೇಕು ಇದಕ್ಕೆ ತಪ್ಪಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


Spread the love