Home Mangalorean News Kannada News ನೆರೆಯಿಂದ ಆಸ್ತಿ ಪಾಸ್ತಿ ಕಳೆದುಕೊಂಡವರಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಹಾಯಧನ

ನೆರೆಯಿಂದ ಆಸ್ತಿ ಪಾಸ್ತಿ ಕಳೆದುಕೊಂಡವರಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಹಾಯಧನ

Spread the love

ನೆರೆಯಿಂದ ಆಸ್ತಿ ಪಾಸ್ತಿ ಕಳೆದುಕೊಂಡವರಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಹಾಯಧನ

ಉಡುಪಿ: ಉಡುಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಭೀಕರ ಮಳೆಯ ನೆರೆಯಿಂದ ಆಸ್ತಿ ಪಾಸ್ತಿ ಕಳೆದುಕೊಂಡ ಕಾಪು ತಾಲೂಕಿನ ವಿವಿಧ ಗ್ರಾಮದ ಪ್ರದೇಶಗಳಿಗೆ ಭೇಟಿ ನೀಡಿ ಸಹಾಯಧನ ವಿತರಿಸಿ ಸರಕಾರದ ವತಿಯಿಂದ ಪರಿಹಾರ ಒದಗಿಸುವ ಬಗ್ಗೆ ಸಹಕರಿಸುವುದಾಗಿ ತಿಳಿಸಿದರು.

ನೆರೆಯ ನೀರು ನುಗ್ಗಿ ಮನೆ ಹಾನಿಗೀಡಾದ ರಂಜನಿ ಪೂಜಾರಿ, ಗೋಪಾಲ್ ಶೇರಿಗಾರ್, ಪುಷ್ಪ ಶೆಟ್ಟಿ, ಲಲಿತಾ ಶೇರಿಗಾರ್ ಮೊದಲಾದವರಿಗೆ ತಾತ್ಕಾಲಿಕ ನೆಲೆಯಲ್ಲಿ ಯುವಮೋರ್ಚಾ ವತಿಯಿಂದ ಸಹಾಯಧನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ, ಅಕ್ಷಿತ್ ಶೆಟ್ಟಿ ಹೆರ್ಗ, ಸ್ಥಳೀಯ ಜಿಲ್ಲಾಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ ಯುವಮೋರ್ಚಾ ಉಪಾಧ್ಯಕ್ಷ ಸುಮಿತ್ ಮಡಿವಾಳ, ಕಾರ್ಯದರ್ಶಿ ಪ್ರವೀಣ್ ಪೂಜಾರಿ, ಅಭಿರಾಜ್ ಸುವರ್ಣ ಮತ್ತಿತರ ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ಧರು


Spread the love

Exit mobile version