ನೇಕಾರ ಲಕ್ಷ್ಮಣ್ ಶೆಟ್ಟಿಗಾರ್ ಕುಟುಂಬಕ್ಕೆ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನೆರವು

Spread the love

ನೇಕಾರ ಲಕ್ಷ್ಮಣ್ ಶೆಟ್ಟಿಗಾರ್ ಕುಟುಂಬಕ್ಕೆ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನೆರವು

ಉಡುಪಿ: ಭಾನುವಾರ ಸುರಿದ ಭಾರಿ ಮಳೆಯಿಂದಾಗಿ ಉಡುಪಿಯ ನೇಕಾರ ಲಕ್ಷ್ಮಣ್ ಶೆಟ್ಟಿಗಾರ್ ಅವರ ಯಂತ್ರಗಳಿಗೆ ನೀರು ನುಗ್ಗಿ ಹಾಳಾಗುವ ಸ್ಥಿತಿಯಲ್ಲಿದ್ದು ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೋಮವಾರ ಆರ್ಥಿಕ ನೆರವು ನೀಡಲಾಯಿತು.

ಯಕ್ಷಗಾನಕ್ಕೆ ಬಳಸುವ ಚಂದದ ಸೀರೆಗಳನ್ನು ನೇಯ್ಗೆಕಾಯಕದಲ್ಲಿ ತೊಡಗಿಸಿಕೊಂಡಿರುವ ಕೆಲವೇ ಕೆಲವು ನೇಕಾರರಲ್ಲಿ ಉಡುಪಿಯ ಲಕ್ಷ್ಮಣ ಶೆಟ್ಟಿಗಾರ್ ಮತ್ತು ಅವರ ಪತ್ನಿ ಕೂಡ ಒಬ್ಬರು.ನಿನ್ನೆ ಸುರಿದ ಬಾರಿ ಮಳೆಗೆ ಅವರ ಯಂತ್ರಗಳು ಹಾಳಾಗುವ ಸ್ಥಿತಿಯಲ್ಲಿದ್ದು ಅವುಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿಯನ್ನು ನೋಡಿ ಯುವಮೋರ್ಚಾ ರಾಜ್ಯಾಧ್ಯಕ್ಷರಾಗಿರುವ ಡಾಕ್ಟರ್ ಸಂದೀಪ್ ಜಿಲ್ಲಾ ಅಧ್ಯಕ್ಷರಾಗಿರುವ ವಿಖ್ಯಾತ್ ಶೆಟ್ಟಿ ಅವರಿಗೆ ಕರೆ ಮಾಡಿ ತಿಳಿಸಿದ್ದು, ತಕ್ಷಣ ಸ್ಪಂದಿಸಿದ ಬಿಜೆಪಿ ಉಡುಪಿ ಜಿಲ್ಲಾ ಯುವಮೋರ್ಚಾ ತಂಡ ಅವರ ಮನೆಗೆ ಭೇಟಿ ನೀಡಿ ಆರ್ಥಿಕ ಸಹಾಯಧನ ಮಾಡಲಾಯಿತು.

ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ಪ್ರದಾನ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ, ಅಕ್ಷಿತ್ ಶೆಟ್ಟಿ ಸ್ಥಳೀಯ ಜಿಲ್ಲಾಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ ಯುವಮೋರ್ಚಾ ಉಪಾಧ್ಯಕ್ಷ ಸುಮಿತ್ ಮಡಿವಾಳ, ಕಾರ್ಯದರ್ಶಿ ಪ್ರವೀಣ್ ಪೂಜಾರಿ, ಅಭಿರಾಜ್ ಸುವರ್ಣ ಮತ್ತಿತರ ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ಧರು


Spread the love