Home Mangalorean News Kannada News ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ

Spread the love

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ

ಮಂಗಳೂರು: ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬರೀಮಾರು ಎಂಬಲ್ಲಿ ಶನಿವಾರ ಸಂಭವಿಸಿದೆ.

ಮೃತರನ್ನು ಮನೀಷ್ (14), ಅಜಿತ್ (13) ಎಂದು ಗುರುತಿಸಲಾಗಿದೆ. ಇದೇ ವೇಳೆ ರಕ್ಷಿತ್ (13) ಎಂಬ ಬಾಲಕನನ್ನು ರಕ್ಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ- ಮಾಣಿ ರಾಷ್ಟ್ರೀಯ ಹೆದ್ದಾರಿ ನಡುವಿನ ಸೂರಿಕುಮೇರು ಸಮೀಪದ ಬರಿಮಾರು ಎಂಬಲ್ಲಿ ಸ್ಥಳೀಯ ನಿವಾಸಿ ಸಂಜೀವ ಬೋವಿ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆ ಕುಂಬ್ಳೆಯಿಂದ ಸಂಬಂಧಿಕರು ಬಂದಿದ್ದರು.ಅದರಲ್ಲಿ ಏಳು ಮಂದಿ ಮಕ್ಕಳು ಇಲ್ಲಿನ ನೇತ್ರಾವತಿ ನದಿಗೆ ಸ್ನಾನಕ್ಕೆ ತೆರಳಿದ್ದ ವೇಳೆ ಈ ಪೈಕಿ ಇಬ್ಬರು ಮಕ್ಕಳು ನೀರಿನ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಬಂಟ್ವಾಳ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸಿತ್ತಿದ್ದಾರೆ.


Spread the love

Exit mobile version