ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

Spread the love

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2015 ನೇ ಸಾಲಿನಲ್ಲಿ ವರದಿಯಾದ ದರೋಡೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರನ್ನು ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರು ಪಡೀಲ್ ನಿವಾಸಿ ಧನರಾಜ್ (22) ಮತ್ತು ಧೀರಜ್ (20) ಎಂದು ಗುರುತಿಸಲಾಗಿದೆ.

ಇವರುಗಳು   ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು  ಈ ಬಗ್ಗೆ ಮಾನ್ಯ ನ್ಯಾಯಾಲಯ ಆರೋಪಿಗಳ ಮೇಲೆ ಜಾಮೀನು ರಹಿತ ವಾರೆಂಟ್ ಹೊರಡಿಸಿರುತ್ತದೆ.

ಆರೋಪಿಗಳನ್ನು ಡಿಸೆಂಬರ್ 26 ರಂದು ಬೆಳಿಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಕೆ.ಎಂ.ಶರೀಫ್ ರವರ ನಿರ್ದೇಶನದಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಚಂದ್ರಶೇಖರ ಮತ್ತು ವಾರೆಂಟ್ ಸಿಬ್ಬಂದಿಗಳಾದ, ಸೂರಜ್ , ಭಾಸ್ಕರ ಹಾಗೂ ಠಾಣಾ ಸಿಬ್ಬಂದಿ ಸಿದ್ಧಣ ಗೌಡರವರು ಮಂಗಳೂರು  ನಗರದ ಕಂಕನಾಡಿ ರೈಲ್ಪೆ ನಿಲ್ದಾಣದ ಬಳಿ ದಸ್ತಗಿರಿ  ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು  ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.


Spread the love