ನ. 28 : ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ?
ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು(ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ .
ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ “ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವ” ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸುವ ಬಗ್ಗೆ ಪ್ರಧಾನಿ ಕಚೇರಿ ದೃಢಪಡಿಸಿದ್ದು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಠದ ಮೂಲಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ಇಲಾಖೆ ಈ ವರೆಗೆ ನಮಗೆ ಅಧಿಕೃತವಾದ ಮಾಹಿತಿ ಬಂದಿಲ್ಲ, ಮಠಕ್ಕೆ ಮಾಹಿತಿ ಬಂದಿರಬಹುದು ಅಂತಹ ಅಧಿಕೃತ ಮಾಹಿತಿ ಬಂದಾಗ ತಿಳಿಸಲಾಗುವುದು ಎಂದು ಹೇಳಿದೆ.













